Webdunia - Bharat's app for daily news and videos

Install App

ಕ್ರೈಸ್ತ ಸಂನ್ಯಾಸಿಯರ ಬಗ್ಗೆ ನಿಮ್ಮ ನಿಲುವೇನು? ಎಂದು ಕೇಳಿದ್ದಕ್ಕೆ ಪತ್ರಕರ್ತರ ಮೇಲೆ ಕಿಡಿಕಾರಿದ ಮೋಹನ್‌ ಲಾಲ್

Webdunia
ಬುಧವಾರ, 19 ಸೆಪ್ಟಂಬರ್ 2018 (07:31 IST)
ಕೇರಳ : ಅತ್ಯಾಚಾರ ಪ್ರಕರಣವೊಂದರ ಕುರಿತಾಗಿ ಪತ್ರಕರ್ತರ ಮೇಲೆ ಕಿಡಿಕಾರಿದ ನಟ ಮೋಹನ್‌ ಲಾಲ್ ಇದೀಗ ಪತ್ರಕರ್ತರ ಬಳಿ ಕ್ಷಮೆಯಾಚಿಸಿದ್ದಾರೆ.


ಶನಿವಾರ ಕೊಚ್ಚಿಯಲ್ಲಿ , ವಿಶ್ವಶಾಂತಿ ಪ್ರತಿಷ್ಠಾನದ ಆಶ್ರಯದಲ್ಲಿ ಆಯೋಜಿಸಲಾದ ಕೇರಳ ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿಗಳನ್ನು ರವಾನಿಸುವ ಕಾರ್ಯಕ್ರಮದಲ್ಲಿ ನಟ ಮೋಹನ್‌ಲಾಲ್ ಪಾಲ್ಗೊಂಡಿದ್ದರು. ಈ ಸಂದರ್ಭ ಪತ್ರಕರ್ತರೊಬ್ಬರು, ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಷಪ್‌ರನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕ್ರೈಸ್ತ ಸನ್ಯಾಸಿನಿಯರ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಶ್ನಿಸಿದ್ದರು.


ಈ ಪ್ರಶ್ನೆಯಿಂದ ಕೋಪಗೊಂಡ ಮೋಹನ್‌ಲಾಲ್, ಇಂತಹ ಒಳ್ಳೆಯ ಕಾರ್ಯ ಮಾಡುತ್ತಿರುವಾಗ ಈ ರೀತಿಯ ಪ್ರಶ್ನೆ ಕೇಳಲು ನಿಮಗೆ ನಾಚಿಕೆಯಾಗೋಲ್ಲವೇ ಎಂದು ಪತ್ರಕರ್ತರ ಮೇಲೆ ಕಿಡಿಕಾರಿದ್ದಾರೆ. ಅಲ್ಲದೆ, ಕ್ರೈಸ್ತ ಸನ್ಯಾಸಿನಿಯರ ಪ್ರಕರಣಕ್ಕೂ ನೆರೆ ಪರಿಹಾರ ಕಾರ್ಯಕ್ರಮಕ್ಕೂ ಏನಾದರೂ ಸಂಬಂಧವಿದೆಯೇ ಎಂದೂ ಪ್ರಶ್ನಿಸಿದ್ದಾರೆ.


ಈ ಹೇಳಿಕೆಯ ಬಗ್ಗೆ  ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಇದೀಗ ನಟ ಮೋಹನ್‌ಲಾಲ್ ಫೇಸ್‌ಬುಕ್‌ನಲ್ಲಿ ಈ ಹೇಳಿಕೆಯ ಬಗ್ಗೆ ಪತ್ರಕರ್ತರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ನೆರೆ ಪರಿಹಾರ ವಿತರಣೆಯ ಕುರಿತು ನಾನು ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡುತ್ತಿರುವಾಗ ಈ ಪ್ರಶ್ನೆ ಎತ್ತಲಾಗಿದೆ. ಇದು ಆ ಸಂದರ್ಭಕ್ಕೆ ಪೂರಕವಾಗಿರಲಿಲ್ಲ. ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ ಈಗ ಖಂಡಿತಾ ಅತ್ಯಂತ ಹೆಚ್ಚು ಚರ್ಚೆಯಲ್ಲಿರುವ ವಿಷಯವಾಗಿದೆ. ಆದರೆ ಆಗ ನಾನು ಬೇರೆಯೇ ಮನಸ್ಥಿತಿಯಲ್ಲಿದ್ದೆ. ಆದ್ದರಿಂದ ಇಂತಹ ಪ್ರತಿಕ್ರಿಯೆ ಬಂದಿದೆ ಎಂದು ಮೋಹನ್‌ಲಾಲ್ ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments