Webdunia - Bharat's app for daily news and videos

Install App

ಮಗನ ವಿಷಯದಲ್ಲಿ ಇದೆಂತಹ ಎಡವಟ್ಟು ಮಾಡಿಕೊಂಡ್ರು ಅಮಿತಾಬ್ ಬಚ್ಚನ್ !

Webdunia
ಮಂಗಳವಾರ, 3 ಏಪ್ರಿಲ್ 2018 (07:24 IST)
ಮುಂಬೈ : ಬಾಲಿವುಡ್ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಹಿಂದೊಮ್ಮೆ ಟೀಂ ಇಂಡಿಯಾದ ಆಟಗಾರ ದಿನೇಶ್ ಕಾರ್ತಿಕ್ ಅವರಿಗೆ ಟ್ವೀಟ್ ಮೂಲಕ ಶುಭ ಕೋರಲು ಹೋಗಿ ಎಡವಟ್ಟು ಮಾಡಿಕೊಂಡು ಕ್ಷಮೆ ಕೇಳಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಅದೇರೀತಿ ಇದೀಗ ಮತ್ತೊಮ್ಮೆ ತಮ್ಮ ಮಗ ನಟ ಅಭಿಷೇಕ್ ಬಚ್ಚನ್ ಅವರ  ಬಗ್ಗೆ ಟ್ವೀಟ್ ಮಾಡುವಾಗ ಎಡವಟ್ಟು ಮಾಡಿಕೊಂಡಿದ್ದಾರೆ.


ಶನಿವಾರ ನಟ ಅಭಿಷೇಕ್ ಬಚ್ಚನ್ ಪಂಜಾಬ್‍ನ ಅಟರಿ ಗ್ರಾಮದಲ್ಲಿರುವ ಭಾರತದ ಹಾಗೂ ಪಾಕ್ ಬಾರ್ಡರ್ ನಲ್ಲಿ ನಡೆದ ಕಾರ್ಯಕ್ರಮವನ್ನು ವೀಕ್ಷಿಸಲು ಹೋಗಿದ್ದರು. ಅಲ್ಲಿ ಅವರು ರಾಷ್ಟ್ರ ಧ್ವಜವನ್ನು ತಮ್ಮ ಕೈಯಲ್ಲಿ ಹಿಡಿದಿದ್ದು, ಆ ಫೋಟೋವನ್ನು  ಅಮಿತಾಬ್ ಬಚ್ಚನ್ ಅವರು ತಮ್ಮ ಟ್ವಿಟ್ಟರಿನಲ್ಲಿ ಹಾಕಿ ,’ಅಭಿಷೇಕ್ ಬಚ್ಚನ್ ವಾಘಾ ಬಾರ್ಡರ್ ನಲ್ಲಿದ್ದಾರೆ. ಜೈ ಹಿಂದ್! ಭಾರತ್ ಮಾತಾ ಕೀ ಜೈ! ಅದು ಒಂದು ಅದ್ಭುತ ಅನುಭವವಾಗಿತ್ತು ಎಂದು ಅವರು ನನಗೆ ಹೇಳಿದರು. ದೇಶಭಕ್ತಿಯ ಭಾವನೆ ನೋಡಲು ನನಗೆ ಅವಕಾಶ ಸಿಕ್ಕಿತ್ತು ಹಾಗೂ ರೋಮಾಂಚನವಾಯಿತು. ಆ ಗಾರ್ಡ್ ಸೆರಮನಿಯಲ್ಲಿ ನಾನು ವಾಯ್ಸ್ ಓವರ್ ನೀಡಿದ್ದೆ ಎಂದು ಟ್ವೀಟ್ ಮಾಡಿದ್ದರು.


ಆದರೆ ಅವರು ಅದರಲ್ಲಿ ಅಟರಿ ಬಾರ್ಡರ್ ಬದಲು ವಾಘಾ ಬಾರ್ಡರ್ ಎಂದು ಬರೆದಿದ್ದರು. ನಂತರ ಅವರು ತಮ್ಮ ತಪ್ಪನ್ನು ಅರಿತು ಮತ್ತೊಂದು ಟ್ವೀಟ್ ಮಾಡಿ ಅಭಿಷೇಕ್ ರಾಷ್ಟ್ರಧ್ವಜ ಹಿಡಿದು ನಿಂತಿರೋದು ವಾಘಾ ಬಾರ್ಡರ್ ನಲ್ಲಿ ಅಲ್ಲ ಅಟಾರಿ ಬಾರ್ಡರ್ ನಲ್ಲಿ. ವಾಘಾ ಬಾರ್ಡರ್ ಪಾಕಿಸ್ತಾನದ ಹತ್ತಿರ ಇದೆ ಎಂದು ಬರೆದು ತಮ್ಮ ತಪ್ಪನ್ನು ಸರಿಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments