Webdunia - Bharat's app for daily news and videos

Install App

ಮಾಧ್ಯಮಗಳ ಮೇಲೆ ಫುಲ್ ಗರಂ ಆದ ನಟ ಅಭಿಷೇಕ್ ಬಚ್ಚನ್. ಕಾರಣವೇನು ಗೊತ್ತಾ?

Webdunia
ಗುರುವಾರ, 26 ಜುಲೈ 2018 (07:09 IST)
ಮುಂಬೈ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕೆ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ.


ಹೌದು. ಇತ್ತೀಚೆಗೆ ನಟ ಅಭಿಷೇಕ್ ಬಚ್ಚನ್ ಲಂಡನ್ನಿಂದ ಮುಂಬೈಗೆ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಜೊತೆಗೆ ಆಗಮಿಸಿದ ವೇಳೆ ಅಭಿಷೇಕ್ ಅವರಿಂದ  ಐಶ್ವರ್ಯ ರೈ ಸ್ವಲ್ಪ ಅಂತರವನ್ನು ಕಾಯ್ದುಕೊಂಡಿದ್ದರು. ಈ ವಿಡಿಯೋ ಆಧಾರದ ಮೇಲೆ ದಂಪತಿ ನಡುವೆ ಜಗಳ ನಡೆದಿದೆ ಅಂತ ವೆಬ್ ಪೋರ್ಟಲ್ ಒಂದು ವರದಿ ಮಾಡಿತ್ತು. ಜಗಳ ನಡೆದಿರುವ ಕಾರಣಕ್ಕೆ ಐಶ್ವರ್ಯ ರೈ ಪುತ್ರಿಯನ್ನು ಅಭಿಷೇಕ್ ಕೈಹಿಡಿದುಕೊಳ್ಳದಂತೆ ತಡೆದಿದ್ದಾರೆ ಅಂತ ಆ ವರದಿಯಲ್ಲಿ ಬರೆಯಲಾಗಿತ್ತು.


ಈ ಸುದ್ದಿ ನಟ ಅಭಿಷೇಕ್ ಬಚ್ಚನ್ ಅವರ ಕಿವಿಗೆ ಬೀಳುತ್ತಲೇ ಮಾಧ್ಯಮಗಳ ಮೇಲೆ ಫುಲ್ ಗರಂ ಆಗಿ ‘ಪೈಪೋಟಿಗೆ ಬಿದ್ದು ಸುದ್ದಿ ಪ್ರಕಟಿಸುವ ಆತುರದಲ್ಲಿ ಸುಳ್ಳು ಸುದ್ದಿ ಪ್ರಕಟಿಸದಿರಿ. ಸುದ್ದಿ ಸೃಷ್ಟಿಸಬೇಕೆಂಬ ನಿಮ್ಮ ಆತುರದ ಮಧ್ಯೆ ಸತ್ಯ ಯಾವುದು ಅನ್ನೋದನ್ನು ಅರಿಯುವ ಸಹನೆ ಇರಲಿ , ಇಂಟರ್ ನೆಟ್ ಅನ್ನೋ ಪ್ರಬಲ ಮಾಧ್ಯಮದಲ್ಲಿ ಊಹಾಪೋಹದ ಸುದ್ದಿ ಹರಡಬೇಡಿ’ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments