Select Your Language

Notifications

webdunia
webdunia
webdunia
webdunia

ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರಗೊಂಡಿದ್ಯಾಕೆ?

ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರಗೊಂಡಿದ್ಯಾಕೆ?
ಹೈದರಾಬಾದ್ , ಶುಕ್ರವಾರ, 4 ಮೇ 2018 (06:57 IST)
ಹೈದರಾಬಾದ್ : ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ನಟಿ ಅನುಷ್ಕಾ ಅವರು ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ವಾಸ್ತವ್ಯ ಹೂಡಿದ್ದು, ಬೆಳಗಿನ ಜಾವ 4 ಗಂಟೆಗೆ 17 ಕಿಲೋ ಮೀಟರ್ ದೂರದಲ್ಲಿರುವ ಕೇದಾರನಾಥ ದೇವಾಲಯಕ್ಕೆ ಕಾಲ್ನಡಿಗೆಯಲ್ಲೇ ಸಾಗಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಹೊರ ಬಂದ ಬಳಿಕ ಅಭಿಮಾನಿಗಳು ಅನುಷ್ಕಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಮೊದಲಿಗೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಿದ್ದ ಅನುಷ್ಕಾ ಅವರು ನಂತರ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಿ ಭದ್ರತೆ ಸಮಸ್ಯೆ ಕಾರಣಕ್ಕೆ ತಾಳ್ಮೆ ಕಳೆದುಕೊಂಡು ಅಲ್ಲಿಂದ ಹೊರಟಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಅವರ ಮೇಲೆ ಬೇಸರಗೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಕಪಿಲ್‌ ಶರ್ಮಾ ಪತ್ರಕರ್ತ ವಿಕ್ಕಿ ಲಲ್ವಾನಿ ವಿರುದ್ಧ ಲೀಗಲ್‌ ನೋಟಿಸ್‌ ಜಾರಿ ಮಾಡಿದ್ದು ಯಾಕೆ?