Webdunia - Bharat's app for daily news and videos

Install App

ಟಾಲಿವುಡ್ ನಟ ಪವನ್ ಕಲ್ಯಾಣ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಹೇಳಿದ್ಯಾಕೆ?

Webdunia
ಬುಧವಾರ, 11 ಜುಲೈ 2018 (07:46 IST)
ಹೈದರಾಬಾದ್ : ಸಿನಿಮಾರಂಗದಿಂದ ದೂರ ಸರಿದು ರಾಜಕೀಯದಲ್ಲಿ ಬ್ಯುಸಿಯಾಗಿರುವ ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ ಅವರು  ತಮ್ಮ ಸಿನಿಮಾ ಜೀವನದ ಆರಂಭದ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರಂತೆ.


ಭಾನುವಾರ ವಿಶಾಖಪಟ್ಟಣಂನಲ್ಲಿ ಜನಸೇನಾ ಪಕ್ಷದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಪವನ್ ಕಲ್ಯಾಣ ಅವರು ತಮ್ಮ ಸಿನಿಮಾ ಜೀವನದ ಆರಂಭದ ದಿನಗಳನ್ನು ನೆನೆಪಿಸಿಕೊಳ್ಳುವುದರ ಮೂಲಕ ತಾವು ನಟಿಸಿದ 'ಸುಸ್ವಾಗತಂ' ಚಿತ್ರೀಕರಣ ಸಮಯದಲ್ಲಿ ಎದುರಾದ ಘಟನೆಯೊಂದನ್ನು ಬಹಿರಂಗ ಪಡಿಸಿದ್ದಾರೆ.


‘ಸಿನಿಮಾ ರಂಗಕ್ಕೆ ಬಂದ ಆರಂಭದಲ್ಲಿ ತಮಗೆ ಸಂಕೋಚದ ಮನೋಭಾವ ಹೆಚ್ಚಿತ್ತು. 'ಸುಸ್ವಾಗತಂ' ಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನ್ನೊಂದು ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಇದರಲ್ಲಿ ಬಸ್​ ಮೇಲೆ ಹತ್ತಿ ಸಾವಿರಾರು ಜನರ ನೋಡುತ್ತಿದ್ದಾಗ ಡ್ಯಾನ್ಸ್​ ಮಾಡಬೇಕೆಂದು ಹೇಳಿದ್ದರು. ಇದರಿಂದ ನಾನು ತುಂಬಾ ಭಯ ಬಿದ್ದು, ಏನು ಮಾಡೋದು ಎಂದು ತಿಳಿಯದೇ ಅತ್ತಿಗೆ ಸುರೇಖಾಗೆ ಫೋನ್ ಮಾಡಿದೆ. ನಾನು ಸಿನಿಮಾದಲ್ಲಿ ನಟಿಸಲು ಸರಿ ಹೋಗುವುದಿಲ್ಲ ಎಂದು ಅತ್ತಿಗೆಗೆ ಹೇಳಿ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ತಿಳಿಸಿದ್ದೆ’ ಎಂದು ಪವನ್ ಕಲ್ಯಾಣ್​ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments