Select Your Language

Notifications

webdunia
webdunia
webdunia
webdunia

ನಟ ಸಲ್ಮಾನ್ ಖಾನ್ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗರಂ ಆಗಿದ್ದು ಯಾಕೆ? ಇಲ್ಲಿದೆ ನೋಡಿ ಉತ್ತರ

ನಟ ಸಲ್ಮಾನ್ ಖಾನ್ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗರಂ ಆಗಿದ್ದು ಯಾಕೆ? ಇಲ್ಲಿದೆ ನೋಡಿ ಉತ್ತರ
ಬೆಂಗಳೂರು , ಶನಿವಾರ, 19 ಮೇ 2018 (06:18 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣ ಮೃಗಗಳ ಭೇಟಿ ಪ್ರಕರಣದಲ್ಲಿ 2 ದಿನ ಜೈಲು ಶಿಕ್ಷೆ ಅನುಭವಿಸಿ ನಂತರ ಜಾಮೀನಿನ ಮೇಲೆ ಹೊರಬಂದಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಈ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿದಕ್ಕೆ  ಪತ್ರಕರ್ತರಿಗೆ ಸಲ್ಮಾನ್ ಖಾನ್ ಅವರು ಖಡಕ್ ಆಗಿ ಉತ್ತರಿಸಿದ್ದಾರಂತೆ.


ಇತ್ತೀಚೆಗೆ ಸಲ್ಮಾನ್ ಖಾನ್ ನಟನೆಯ ರೇಸ್-3 ಟ್ರೇಲರ್ ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ ಚಿತ್ರತಂಡ ಸುದ್ದಿಗೋಷ್ಠಿಯನ್ನು ನಡೆಸಿದ್ದು, ಆ ಸಂದರ್ಭದಲ್ಲಿ  ಪತ್ರಕರ್ತರು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ನೀವು ಅಪರಾಧಿಯಾಗಿ ಜೈಲಿನಲ್ಲಿದ್ದಿರಿ. ಆಗ ನಿಮಗೆ ನಿಮ್ಮ ನಿರ್ಮಾಪಕರು ಹಾಗೂ ಅವರ ಹಣದ ಬಗ್ಗೆ ನಿಮಗೆ ನೋವಾಗಲಿಲ್ಲವೇ ಎಂದು ಸಲ್ಮಾನ್ ಖಾನ್‍ಗೆ ಪ್ರಶ್ನಿಸಿದ್ದರು.
ಈ ಪ್ರಶ್ನೆಗೆ ಸಲ್ಮಾನ್ ಖಾನ್ ಅವರು,’ ನಾನು ಜೀವನ ಪೂರ್ತಿ ಜೈಲಿನಲ್ಲೇ ಇರುತ್ತೇನೆ ಎಂದು ನೀವೆಲ್ಲಾ ಅಂದುಕೊಂಡಿದ್ದೀರ? ಎಂದು ಖಡಕ್ ಆಗಿ ಮರು ಪ್ರಶ್ನೆ ಹಾಕಿ ನಂತರ, ‘ಥ್ಯಾಂಕ್ಯೂ ನಾನು ಆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ’ ಎಂದು ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟ ನಾನಾ ಪಾಟೇಕರ್ ಚಿತ್ತ ಕನ್ನಡದತ್ತ