‘ಲವ್‌ರಾತ್ರಿ' ಚಿತ್ರ ಬಿಡುಗಡೆಯಾಗಬಾರದೆಂದು ಹಿಂದು ಜನಜಾಗೃತಿ ಸಮಿತಿ ಪ್ರತಿಭಟಿಸಲು ಕಾರಣವೇನು ?

Webdunia
ಭಾನುವಾರ, 12 ಆಗಸ್ಟ್ 2018 (07:00 IST)
ಬೆಂಗಳೂರು : ಈ ಹಿಂದೆ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತ್' ಚಿತ್ರದ ವಿರುದ್ಧ ದೇಶಾದ್ಯಾಂತ ಉಗ್ರ ಪ್ರತಿಭಟನೆಗಳು ನಡೆದಿತ್ತು. ಅದೇರೀತಿ ಇದೀಗ ಬಾಲಿವುಡ್ ನ ಮತ್ತೊಂದು ಸಿನಿಮಾದ ವಿರುದ್ಧ ಪ್ರತಿಭಟನೆ, ವ್ಯಕ್ತವಾಗುತ್ತಿದೆ.


ಹೌದು. ಸಲ್ಮಾನ್ ಖಾನ್ ಅಭಿನಯದ ಚಿತ್ರ 'ಲವ್‌ರಾತ್ರಿ' ಸಿನಿಮಾಕ್ಕೆ ನಿಷೇಧ ಹೇರಬೇಕೆಂದು ಈ ಹಿಂದೆ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಲೋಕ್ ಕುಮಾರ್ ಆಗ್ರಹಿಸಿದ್ದರು. ಇದೀಗ ಈ ಸಿನಿಮಾವನ್ನ ಬಿಡುಗಡೆ ಮಾಡಬಾರದು, ಅದನ್ನ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಹಿಂದುತ್ವವಾದಿ,ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.


ದುರ್ಗಾದೇವಿಯ ಒಂಭತ್ತು ಅವತಾರಗಳನ್ನು ಒಂಭತ್ತು ದಿನ ಪೂಜಿಸುವ ಹಿಂದೂಗಳ ಪವಿತ್ರ ಹಬ್ಬವೇ ನವರಾತ್ರಿ. ಈ ಹಬ್ಬದ ಹೆಸರನ್ನು ಚಿತ್ರಕ್ಕೆ ದುರುಪಯೋಗಪಡಿಸಿಕೊಂಡು 'ಲವ್‌ರಾತ್ರಿ' ಯೆಂದು ಟೈಟಲ್ ಇಡಲಾಗಿದೆ. ಇದು ಹಿಂದು ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಸನಾತನ ಧರ್ಮವಾದ ನಮ್ಮ ಹಿಂದು ಧರ್ಮದಲ್ಲಿ ಪೂಜೆ-ಪುನಸ್ಕಾರಗಳು ನಿತ್ಯ ನಡೆಯುತ್ತವೆ. ಆದ್ರೆ 'ಲವ್ ರಾತ್ರಿ' ಎಂಬ ಸಿನಿಮಾ ಇದಕ್ಕೆ ತದ್ವಿರುದ್ಧ ಎಂದು ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಇರುವ ಗಾಂಧೀಜಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದ್ದಾರೆ.


'ಲವ್‌ರಾತ್ರಿ' ಚಿತ್ರ ಇದೇ ವರ್ಷ ಅಕ್ಟೋಬರ್ 5ರಂದು, ನವರಾತ್ರಿ ಹಬ್ಬದಂದೇ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಸಿರ್ಧರಿಸಿದೆ. ಆದರೆ  ಬಿಡುಗಡೆಗೂ ಮುನ್ನವೇ ಈ ಸಿನಿಮಾ ಇಷ್ಟು ವಿವಾದಕ್ಕೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments