Select Your Language

Notifications

webdunia
webdunia
webdunia
webdunia

ಕೃಷ್ಣಮೃಗಗಳ ಬೇಟೆ ಪ್ರಕರಣ ; ಇಂದು ಶಿಕ್ಷೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ

ಕೃಷ್ಣಮೃಗಗಳ ಬೇಟೆ ಪ್ರಕರಣ ; ಇಂದು ಶಿಕ್ಷೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ
ಜೋಧ್ಪುರ , ಸೋಮವಾರ, 7 ಮೇ 2018 (09:46 IST)
ಜೋಧ್ಪುರ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಜಾಮೀನನ ಮೇಲೆ ಹೊರಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ ಜೈಲು ಶಿಕ್ಷೆಯನ್ನು ರದ್ದುಪಡಿಸಬೇಕು ಎಂಬ ಅರ್ಜಿಯ ವಿಚಾರಣೆಯನ್ನು ಸೋಮವಾರ(ಇಂದು) ಜೋಧ್‌ಪುರ ನ್ಯಾಯಾಲಯ ನಡೆಯಲಿದೆ.


ಕೃಷ್ಣಮೃಗಗಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್‌ಖಾನ್‌ ದೋಷಿ ಎಂದು ಘೋಷಿಸಿದ್ದ ಕೋರ್ಟ್‌, ಐದು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಎರಡು ದಿನಗಳ ಸೆರೆವಾಸ ಅನುಭವಿಸಿದ್ದ ಸಲ್ಮಾನ್ ,ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಶಿಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಮಾನ್‌ಖಾನ್‌ ಪರ ವಕೀಲರು ಜೋಧ್‌ಪುರ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ದೇಶಕ ಪಿ.ಎನ್.ಸತ್ಯ ರವರ ನಿಧನಕ್ಕೆ ಕಂಬನಿ ಮಿಡಿದ ನಟ ಸುದೀಪ್