Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ನಿಯಮ ಪಾಲಿಸಲು ತಂದೆಯ ಅಂತ್ಯಕ್ರಿಯೆಯಿಂದ ದೂರ ಉಳಿದ ಸಿಎಂ ಯೋಗಿ

ಲಾಕ್ ಡೌನ್ ನಿಯಮ ಪಾಲಿಸಲು ತಂದೆಯ ಅಂತ್ಯಕ್ರಿಯೆಯಿಂದ ದೂರ ಉಳಿದ ಸಿಎಂ ಯೋಗಿ
ಲಕ್ನೋ , ಮಂಗಳವಾರ, 21 ಏಪ್ರಿಲ್ 2020 (09:04 IST)

ಲಕ್ನೋ : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಲಾಕ್ ಡೌನ್ ನಿಯಮ ಪಾಲಿಸುವ ಸಲುವಾಗಿ ಇಂದು ನಡೆಯಲಿರುವ ಅವರ ತಂದೆಯ ಅಂತ್ಯಕ್ರಿಯೆಗೆ ಹೋಗದಿರಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ನಿನ್ನೆ ಸಿಎಂ ಯೋಗಿ ಅವರ ತಂದೆ ಆನಂದ್ ಸಿಂಗ್ ಬಿಶ್ತ್ (89) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ. ಆದರೆ ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸಲು ಲಾಕ್ ಡೌನ್ ಮಾಡಲಾಗಿದೆ.

 

ಈ ನಿಯಮವನ್ನು ಪಾಲಿಸಲು ಸಿಎಂ ಯೋಗಿ ಆದಿತ್ಯನಾಥ್ ತಂದೆ ಅಂತ್ಯಕ್ರಿಯೆಗೆ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಹಾಗೇ ಅಂತ್ಯಕ್ರಿಯೆ ಸಮಯದಲ್ಲಿ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಿ ಎಂದು ತಮ್ಮ ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ನಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗ ನದೀಂ ಪರದಾಟ