ಲಾಕ್ ಡೌನ್ ನಿಂದಾಗಿ ಹೆಚ್ಚುತ್ತಿದೆ ಮಾನಸಿಕ ಖಿನ್ನತೆ ಪ್ರಕರಣಗಳು

Webdunia
ಭಾನುವಾರ, 3 ಮೇ 2020 (08:44 IST)
ಬೆಂಗಳೂರು: ಲಾಕ್ ಡೌನ್ ಎಂದು ಜನತೆ ಮನೆಯಲ್ಲೇ ಬಂಧಿಯಾಗಿ ಎಷ್ಟೋ ದಿನ ಕಳೆದಿದೆ. ಇನ್ನೂ ಎರಡು ವಾರ ಕಾಲ ಲಾಕ್ ಡೌನ್ ವಿಸ್ತರಣೆಯಾಗಿದೆ. ಹೀಗಿರುವಾಗ ಮನೆಯಲ್ಲೇ ಬಂಧಿಯಾಗಿರುವವರ ಮಾನಸಿಕ ಆರೋಗ್ಯವೂ ಕ್ಷೀಣಿಸುತ್ತಿದೆ.


ಮಹಿಳೆಯರು ವಿನಾಕಾರಣ ಮನೆಯವರ ಮೇಲೆ ಸಿಡುಕುವುದು, ಕೋಪಗೊಳ್ಳುವುದು, ಬೇಗನೇ ಅಳುವುದು ಇತ್ಯಾದಿ ಖಿನ್ನತೆಯ ಲಕ್ಷಣ ತೋರಿದರೆ ಪುರುಷರಿಗೆ ಭವಿಷ್ಯದ ಭಯ ಕಾಡುತ್ತಿದೆ.

ಇದೆಲ್ಲವೂ ಮಾನಸಿಕ ಖಿನ್ನತೆಗೆ ಕಾರಣವಾಗುತ್ತಿದೆ. ಲಾಕ್ ಡೌನ್ ಮುಗಿದ ಮೇಲೂ ಮಾನಸಿಕ ಸ್ವಾಸ್ಥ್ಯ ಕೆಡುವ ಅನೇಕ ಘಟನೆಗಳು ನಡೆಯಲಿವೆ. ಹಲವರು ಉದ್ಯೋಗ ಕಳೆದುಕೊಳ್ಳಲಿದ್ದರೆ, ಇನ್ನು ಹಲವರು ಹಣ ಹೊಂದಿಸಲಾಗದೇ ಮತ್ತಷ್ಟು ನರಕಯಾತನೆ ಅನುಭವಿಸಲಿದ್ದಾರೆ.

ಡಿಪ್ರೆಷನ್ ನಿಂದ ಹೊರಬರಲು ಅನೇಕರು ಡಿಜಿಟಲ್ ಯಂತ್ರಗಳ ಮೊರೆ ಹೋಗುತ್ತಿದ್ದಾರೆ. ಮೊಬೈಲ್ ಅತಿಯಾಗಿ ನೋಡುವುದು, ಟಿವಿ ನೋಡುವುದು, ಇಂಟರ್ನೆಟ್ ಬಳಕೆ ಹೆಚ್ಚುತ್ತಿದೆ. ಅಂತೂ ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ಸಹಕಾರಿಯಾಗಿದ್ದರೂ ಇದರ ಪರಿಣಾಮ ಇನ್ನೊಂದು ರೀತಿಯಾಗಿ ಜನರ ಮೇಲಾಗುತ್ತಿದೆ ಎನ್ನುವುದನ್ನು ಮರೆಯಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ
Show comments