Publish Date: Thu, 09 Jul 2020 (10:14 IST)
Updated Date: Thu, 09 Jul 2020 (10:31 IST)
Normal
0
false
false
false
EN-US
X-NONE
X-NONE
ಚಿಕ್ಕಮಗಳೂರು : ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಆಗುವಂತೆ ಡಿಸಿ ಸೂಚಿಸಿದ್ದಾರೆ.
ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್ ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. ಎಂಎಲ್ ಸಿ ಪ್ರಾಣೇಶ್ ಗೆ ಕೊರೊನಾ ಸೋಂಕು ತಗುಲಿದ ಕಾರಣ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು , ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ದರು.
ಆದರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿರಲಿಲ್ಲ. ಈ ಹಿನ್ನಲೆಯಲ್ಲಿ ಎಂ.ಪಿ.ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಆಗುವಂತೆ ಡಿಸಿ ಸೂಚಿಸಿದ್ದಾರೆ ಎನ್ನಲಾಗಿದೆ.
pavithra
Publish Date: Thu, 09 Jul 2020 (10:14 IST)
Updated Date: Thu, 09 Jul 2020 (10:31 IST)