Webdunia - Bharat's app for daily news and videos

Install App

ನೌಕರಿ ಕತೆ ಏನಾಯ್ತೋ?! ಉದ್ಯೋಗಸ್ಥರ ಚಿಂತೆ

Webdunia
ಭಾನುವಾರ, 19 ಏಪ್ರಿಲ್ 2020 (09:02 IST)
ಬೆಂಗಳೂರು: ಲಾಕ್ ಡೌನ್ ಪಾಲಿಸದಿದ್ದರೆ ಜೀವಕ್ಕೆ ಆಪತ್ತು. ಲಾಕ್ ಡೌನ್ ಪಾಲಿಸಿದರೆ ಜೀವನಕ್ಕೆ ಕುತ್ತು.. ಇದು ಉದ್ಯೋಗಸ್ಥರ ಸದ್ಯದ ಪರಿಸ್ಥಿತಿ.


ಕಂಪನಿ ಬಾಗಿಲು ಮುಚ್ಚಿ ಬರೋಬ್ಬರಿ ತಿಂಗಳಾಗುತ್ತಾ ಬಂದಿದೆ. ಸೋಮವಾರದಿಂದ ಐಟಿ-ಬಿಟಿ ಕಂಪನಿಗಳಿಗೆ ಶೇ. 50 ರಷ್ಟು ಹಾಜರಾತಿಯಲ್ಲಿ ಕಚೇರಿ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಐಟಿ-ಬಿಟಿಯವರು ಈಗಾಗಲೇ ವರ್ಕ್ ಫ್ರಂ ಹೋಂ ಮಾಡುತ್ತಿದ್ದಾರೆ.

ಆದರೆ ಬೇರೆ ಖಾಸಗಿ ಕಂಪನಿ ಉದ್ಯೋಗಸ್ಥರಿಗೆ, ಮನೆಯಿಂದ ಕೆಲಸ ಮಾಡಲು ಸಾಧ‍್ಯವಾಗದ ನೌಕರರಿಗೆ ಭವಿಷ್ಯದ ಚಿಂತೆ ಕಾಡಿದೆ. ಇನ್ನೂ ಕೆಲವು ದಿನ ಕಂಪನಿ ಬಾಗಿಲು ಮುಚ್ಚಿದರೆ ಮುಂದೆ ತೆರೆದರೂ ಸಾಕಷ್ಟು ಕೆಲಸದ ಆರ್ಡರ್ ಸಿಗುತ್ತದೆಂಬ ನಂಬಿಕೆಯಿಲ್ಲ. ನಷ್ಟದ ಭೀತಿಯಿಂದ ಕೆಲವು ಸಣ್ಣ ಪುಟ್ಟ ಕಂಪನಿಗಳು ಈಗಾಗಲೇ ಬಾಗಿಲು ಮುಚ್ಚುವ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಲಾಕ್ ಡೌನ್ ತೆರೆದರೂ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದು. ಆಗ ನೌಕರಿಯ ಗತಿಯೇನು? ಭವಿಷ್ಯದ ಗತಿಯೇನು ಎಂಬ ಆತಂಕ ಉದ್ಯೋಗಸ್ಥರನ್ನು ಕಾಡುತ್ತಿದೆ.

ಸರ್ಕಾರ ಈಗಾಗಲೇ ಕಂಪನಿ ಮುಚ್ಚುವುದು, ನೌಕರಿಯಿಂದ ವಜಾ ಮಾಡುವುದು ಮಾಡಬೇಡಿ ಎಂದು ಮನವಿ ಮಾಡುತ್ತಲೇ ಇದೆ. ಆದರೆ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಂಪನಿಗಳು ಸರ್ಕಾರದ ಮನವಿಗೆ ಓಗೊಡುತ್ತಾರಾ ಎನ್ನುವುದೇ ಪ್ರಶ್ನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments