ಭಾರತ-ಶ್ರೀಲಂಕಾ 2011 ರ ವಿಶ್ವಕಪ್ ಫೈನಲ್ ಗೆ ಇದೀಗ ತನಿಖೆಯ ಹಾದಿಯಲ್ಲಿ?!

Webdunia
ಗುರುವಾರ, 20 ಜುಲೈ 2017 (09:56 IST)
ಕೊಲೊಂಬೋ: 2011 ರಲ್ಲಿ ಮುಂಬೈನಲ್ಲಿ ನಡೆದ ಭಾರತ-ಶ್ರೀಲಂಕಾ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ಫಿಕ್ಸ್ ಆಗಿತ್ತು ಎಂಬ ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗಾ ಹೇಳಿಕೆಯನ್ನು ಅಲ್ಲಿನ ಕ್ರೀಡಾ ಸಚಿವರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.


ಶ್ರೀಲಂಕಾ ಸರ್ಕಾರದಲ್ಲಿ ಹಾಲಿ ಸಚಿವರೂ ಆಗಿರುವ ರಣತುಂಗಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸುವುದಾಗಿ ಅಲ್ಲಿನ ಕ್ರೀಡಾ ಸಚಿವ ದಯಸಿರಿ ಜಯಸೇಖರ ಹೇಳಿದ್ದಾರೆ. ‘ಯಾರಾದರೂ ಈ ಬಗ್ಗೆ ಲಿಖಿತ ದೂರು ನೀಡಿದರೆ ತನಿಖೆಗೆ ಸಿದ್ಧ’ ಎಂದಿದ್ದಾರೆ.

ಅಂದು ಪಂದ್ಯದ ವೀಕ್ಷಕ ವಿವರಣೆಕಾರರಾಗಿದ್ದ ರಣತುಂಗಾ ಲಂಕಾ ತಂಡ ಆಡಿದ ರೀತಿ ಪ್ರಶ್ನಾರ್ಹವಾಗಿತ್ತು ಎಂದಿದ್ದರು. ರಣತುಂಗಾರ ಈ ಆರೋಪಕ್ಕೆ ಭಾರತ ಮತ್ತು ಲಂಕಾ ಕ್ರಿಕೆಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೂ, ತನಿಖೆ ನಡೆದು, ರಣತುಂಗಾ ಅಂದುಕೊಂಡಂತೆ ಫಿಕ್ಸಿಂಗ್ ಏನಾದರೂ ನಡೆದಿದ್ದರೆ, ಭಾರತ ಗೆದ್ದಿದ್ದ ಆ ವಿಶ್ವಕಪ್ ಕೂಟಕ್ಕೆ ಭಾರೀ ಮುಖಭಂಗವಾಗಲಿದೆ.

ಇದನ್ನೂ ಓದಿ..  ಯುದ್ಧಕ್ಕೆ ಸನ್ನದ್ಧವಾಗುತ್ತಿರುವ ಚೀನಾಕ್ಕೆ ಭಾರತ ಕೊಡುತ್ತಿರುವ ತಿರುಗೇಟು ಹೇಗೆ ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments