Webdunia - Bharat's app for daily news and videos

Install App

ಕೊರೋನಾದಿಂದ ಸಂಕಷ್ಟಕ್ಕೀಡಾದವರ ಹಸಿವು ತಣಿಸಲಿರುವ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್

Webdunia
ಶನಿವಾರ, 25 ಏಪ್ರಿಲ್ 2020 (10:00 IST)
ಮುಂಬೈ: ಕೊರೋನಾವೈರಸ್ ಹರಡುವಿಕೆ ತಡೆಯಲು ಲಾಕ್ ಡೌನ್ ಮಾಡಿದ ಹಿನ್ನೆಯಲ್ಲಿ ಎಷ್ಟೋ ಬಡವರಿಗೆ ಒಪ್ಪೊತ್ತಿನ ಊಟಕ್ಕೆ ಗತಿಯಿಲ್ಲದಂತಾಗಿದೆ. ಇಂತಹವರ ಹಸಿವು ನೀಗಿಸುವ ಕೆಲಸವನ್ನು ಆರ್ ಸಿಬಿ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಮಾಡಲಿದ್ದಾರೆ.


ಇನ್ ಸ್ಟಾಗ್ರಾಂ ಲೈವ್ ನಲ್ಲಿ ಜತೆಯಾಗಿ ಬಂದ ಎಬಿಡಿ ಮತ್ತು ಕೊಹ್ಲಿ ಬಡವರ ಹಸಿವು ತಣಿಸಲು 2016 ರ ಐಪಿಎಲ್ ನಲ್ಲಿ ತಾವು ಬಳಕೆ ಮಾಡಿದ್ದ ಬ್ಯಾಟ್, ಗ್ಲೌಸ್, ಶರ್ಟ್ ನ್ನು ಆನ್ ಲೈನ್ ನಲ್ಲಿ ಹರಾಜಿಗಿಟ್ಟು ಅದರಿಂದ ಬಂದ ಹಣವನ್ನು ಹಸಿವು ನೀಗಿಸುವ ಕೆಲಸಕ್ಕೆ ಬಳಸುವುದಾಗಿ ಇಬ್ಬರೂ ಆಟಗಾರರು ಘೋಷಿಸಿದ್ದಾರೆ.

ಈ ಪ್ರಸ್ತಾಪವನ್ನು ಮೊದಲು ತೆರೆದಿಟ್ಟವರು ಎಬಿಡಿ. 2016 ರಲ್ಲಿ ತಾವು ಶತಕ ಸಿಡಿಸಿದ ಬ್ಯಾಟ್, ಆ ಪಂದ್ಯದಲ್ಲಿ ಬಳಸಿದ ಗ್ಲೌಸ್ ಗಳನ್ನು ಹರಾಜು ಹಾಕೋಣ. ಕೊರೋನಾದಿಂದಾಗಿ ಹಸಿವಿನಿಂದಿರುವ ಕೂಗು ನನ್ನ ಮನಸ್ಸಿಗೆ ನೋವುಂಟು ಮಾಡುತ್ತಿದೆ ಎಂದು ಎಬಿಡಿ ಕೊಹ್ಲಿಯನ್ನು ಕೇಳಿಕೊಂಡಿದ್ದಾರೆ. ಇದಕ್ಕೆ ಕೊಹ್ಲಿ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments