Webdunia - Bharat's app for daily news and videos

Install App

ಕೆಎಲ್ ರಾಹುಲ್ ಹೀಗೆ ಮಾಡಿದ್ದಕ್ಕೇ ಅವರಿಗೆ ವಿಶ್ವಕಪ್ ನಲ್ಲಿ ಸ್ಥಾನ ಸಿಗಲಿಲ್ಲ: ಅಜಿತ್ ಅಗರ್ಕರ್ ಸ್ಪಷ್ಟನೆ

Krishnaveni K
ಶುಕ್ರವಾರ, 3 ಮೇ 2024 (10:52 IST)
Photo Courtesy: X
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಗೆ ಸ್ಥಾನ ಸಿಕ್ಕಿಲ್ಲ. ಈ ವಿಚಾರದ ಬಗ್ಗೆ ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟನೆ ನೀಡಿದ್ದಾರೆ.

ಕೆಎಲ್ ರಾಹುಲ್ ಹಿರಿಯ ಆಟಗಾರನಾಗಿದ್ದರೂ ಅವರನ್ನು ಕಡೆಗಣಿಸಲಾಗಿತ್ತು. ಇದು ಭಾರೀ ಟೀಕೆಗೆ ಗುರಿಯಾಗಿತ್ತು. ಕೆಎಲ್ ರಾಹುಲ್ ಈ ಮೊದಲು ಹಲವು ಬಾರಿ ತಂಡಕ್ಕೆ ಆಪತ್ ಬಾಂಧವನಾಗಿ ತಂಡಕ್ಕೆ ನೆರವಾಗಿದ್ದರು. ಆದರೆ ಈಗ ಟಿ20 ವಿಶ್ವಕಪ್ ಗೆ ಅವರನ್ನು ಕಡೆಗಣಿಸಿರುವುದು ಚರ್ಚೆಗೆ ಕಾರಣವಾಗಿತ್ತು.

ಇದೀಗ ಅಜಿತ್ ಅಗರ್ಕರ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿರುವ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ. ಇದುವರೆಗೆ ಒಂದೆರಡು ಪಂದ್ಯಗಳಲ್ಲಿ ಬಿಟ್ಟರೆ ಅವರಿಂದ ಉತ್ತಮ ಇನಿಂಗ್ಸ್ ಬಂದಿಲ್ಲ. ಟೀಂ ಇಂಡಿಯಾಗೆ ಸದ್ಯಕ್ಕೆ ಆರಂಭಿಕರ ಅಗತ್ಯವಿಲ್ಲ.

ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಮತ್ತು ರಿಷಬ್ ಪಂತ್ ಆಡಬಲ್ಲರು. ಇಬ್ಬರೂ ಈ ಐಪಿಎಲ್ ನಲ್ಲಿ ಮಧ‍್ಯಮ ಕ್ರಮಾಂಕದಲ್ಲಿ ಆಡಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ರಾಹುಲ್ ಅತ್ಯುತ್ತಮ ಆಟಗಾರ. ಆದರೆ ಅವರು ಆರಂಭಿಕರಾಗಿ ಕಣಕ್ಕಿಳಿದಿದ್ದರಿಂದ ಅವರನ್ನು ಅನಿವಾರ್ಯವಾಗಿ ಹೊರಗಿಡಬೇಕಾಯಿತು ಎಂದು ಅಜಿತ್ ಅಗರ್ಕರ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments