Webdunia - Bharat's app for daily news and videos

Install App

ರೋಹಿತ್, ಕೋಚ್ ದ್ರಾವಿಡ್ ಜೊತೆ ಡಿ.2 ಅಥವಾ 3 ಕ್ಕೆ ಅಜಿತ್ ಅಗರ್ಕರ್ ಮೀಟಿಂಗ್

Webdunia
ಭಾನುವಾರ, 26 ನವೆಂಬರ್ 2023 (06:40 IST)
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭವಿಷ್ಯದ ಬಗ್ಗೆ ಚರ್ಚಿಸಲು ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಜೊತೆ ಸಭೆ ನಡೆಯಲಿದೆ.

ರೋಹಿತ್ ಶರ್ಮಾ ಮುಂದಿನ ದಿನಗಳಲ್ಲಿ ಏಕದಿನ ಮಾದರಿಯಿಂದಲೂ ದೂರ ಸರಿಯಲಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ಕೋಚ್ ರಾಹುಲ್ ದ್ರಾವಿಡ್ ಕೂಡಾ ಕೋಚ್ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ತೋರಿಸಿಲ್ಲ ಎನ್ನಲಾಗಿದೆ. ಹಾಗಿದ್ದರೂ ಇಬ್ಬರೂ ಇದುವರೆಗೆ ತಮ್ಮ ನಿರ್ಧಾರಗಳನ್ನು ಅಧಿಕೃತವಾಗಿ ಹೇಳಿಕೊಂಡಿಲ್ಲ.

ಹೀಗಾಗಿ ಅಜಿತ್ ಅಗರ್ಕರ್ ಡಿಸೆಂಬರ್ 2 ಅಥವಾ 3 ರಂದು ಮುಂಬೈನಲ್ಲಿ ರೋಹಿತ್, ದ್ರಾವಿಡ್ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಹುಶಃ ಅಜಿತ್ ಅಗರ್ಕರ್ ರೋಹಿತ್ ಗೆ ಏಕದಿನ ಮಾದರಿಯಿಂದ ದೂರವುಳಿಯಲು ಸಲಹೆ ನೀಡಬಹುದು. ಅಥವಾ ದ್ರಾವಿಡ್ ಗೆ ಕೋಚ್ ಹುದ್ದೆಯಲ್ಲಿ ಇನ್ನು ಕೆಲವು ದಿನ ಮುಂದುವರಿಯಲು ಸಲಹೆ ನೀಡಬಹುದು.

ಜೂನ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ವರೆಗೆ ದ್ರಾವಿಡ್ ಕೋಚ್ ಆಗಿ ಮುಂದುವರಿಯಲಿ ಎಂಬ ಒತ್ತಾಯ ಕೇಳಿಬರುತ್ತಿದೆ. ಹಾಗಿದ್ದರೂ ಅವರು ಈಗಾಗಲೇ ಐಪಿಎಲ್ ತಂಡದ ಕೋಚ್ ಆಗಲು ಆಸಕ್ತಿ ತೋರಿದ್ದು, ಮುಂದುವರಿಯುವ ಸಾಧ‍್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಈ ಸಭೆಯಲ್ಲಿ ಇಬ್ಬರ ಭವಿಷ್ಯವೂ ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments