Webdunia - Bharat's app for daily news and videos

Install App

ಮೊಹಮ್ಮದ್ ಶಮಿಯನ್ನು ಮರೆಸಿಯೇ ಬಿಟ್ಟ ಆಕಾಶ್ ದೀಪ್ ಸಿಂಗ್

Krishnaveni K
ಬುಧವಾರ, 2 ಅಕ್ಟೋಬರ್ 2024 (08:50 IST)
ಮುಂಬೈ: ಗಾಯದ ಕಾರಣದಿಂದ ಬರೋಬ್ಬರಿ ಒಂದು ವರ್ಷದಿಂದ ಕ್ರಿಕೆಟ್ ನಿಂದ ದೂರವಿರುವ ಸ್ಟಾರ್ ವೇಗಿ ಮೊಹಮ್ಮದ್ ಶಮಿಯನ್ನು ಯುವ ವೇಗಿ ಆಕಾಶ್ ದೀಪ್ ಸಿಂಗ್ ಮರೆಸಿಯೇ ಬಿಟ್ಟಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ ಆಕಾಶ್ ದೀಪ್ ಸಿಂಗ್ ಮೂರನೇ ವೇಗಿಯ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರ ಎಸೆತಗಳು ಅಷ್ಟು ನಿಖರವಾಗಿದ್ದು, ಮಹತ್ವದ ಸಂದರ್ಭಗಳಲ್ಲಿ ಭಾರತಕ್ಕೆ ವಿಕೆಟ್ ನೀಡುವ ಮೂಲಕ ತಮಗಿತ್ತ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ.

ಆಕಾಶ್ ದೀಪ್ ದೇಶೀಯ ಕ್ರಿಕೆಟ್ ನಲ್ಲಿ ಸಾಕಷ್ಟು ಪಳಗಿದವರು. ಹೀಗಾಗಿ ಅವರು ರಾಷ್ಟ್ರೀಯ ತಂಡಕ್ಕೆ ಹೊಸಬರಾದರೂ ಆಟದ ವಿಚಾರಕ್ಕೆ ಬಂದರೆ ಅನುಭವಿಯೇ. ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಸ್ಥಾನವನ್ನು ತುಂಬಬಲ್ಲ ಒಬ್ಬ ಆಟಗಾರನ ಅವಶ್ಯಕತೆಯಿತ್ತು. ಅದನ್ನು ಆಕಾಶ್ ದೀಪ್ ಸಿಂಗ್ ಸಮರ್ಥವಾಗಿ ನಿಭಾಯಿಸಿದ್ದಾರೆ. ಬಹುಶಃ ಈ ಸರಣಿಯಲ್ಲಿ ಭಾರತದ ಬಹುದೊಡ್ಡ ಪ್ಲಸ್ ಪಾಯಿಂಟ್ ಎಂದರೆ ಅದು ಆಕಾಶ್ ದೀಪ್.

ಇನ್ನು, ಇತ್ತ ಮೊಹಮ್ಮದ್ ಶಮಿ ಕಳೆದ ಏಕದಿನ ವಿಶ್ವಕಪ್ ನಲ್ಲಿ ಆಡಿದ್ದೇ ಕೊನೆ. ಏಕದಿನ ವಿಶ್ವಕಪ್ ನ ಹೀರೋ ಆಗಿದ್ದ ಶಮಿ ಬಳಿಕ ಕಾಲು ನೋವಿಗೊಳಗಾದರು. ಶಸ್ತ್ರಚಿಕಿತ್ಸೆಯನ್ನೂ ಮಾಡಿಸಿಕೊಂಡರು. ಈಗಷ್ಟೇ ಅವರು ಬೌಲಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಅವರು ಕಮ್ ಬ್ಯಾಕ್ ಮಾಡುವ ವೇಳೆಗೆ ಆಕಾಶ್ ದೀಪ್ ತಂಡದಲ್ಲಿ ಖಾಯಂ ಸ್ಥಾನ ಪಡೆದುಕೊಂಡರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments