Webdunia - Bharat's app for daily news and videos

Install App

ಮತ್ತೆ ಶುರುವಾಯ್ತು ಸಿಎಸ್ ಕೆ ಟೀಂ-ರವೀಂದ್ರ ಜಡೇಜಾ ನಡುವೆ ಕಿರಿಕ್!

Webdunia
ಮಂಗಳವಾರ, 23 ಮೇ 2023 (09:50 IST)
ಚೆನ್ನೈ: ಐಪಿಎಲ್ 2023 ರಲ್ಲಿ ಪ್ಲೇ ಆಫ್ ಪಂದ್ಯವಾಡಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಡಕಿನ ಮಾತು ಕೇಳಿಬಂದಿದೆ.

ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು ನಾಯಕ ಧೋನಿ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಳೆದ ಪಂದ್ಯ ಮುಗಿದ ಬಳಿಕ ಇಬ್ಬರ ನಡುವೆ ಮಾತುಕತೆ ನಡೆದಿದೆ. ಇದಾದ ಬಳಿಕ ಜಡೇಜಾ ತೀರಾ ಹತಾಶರಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಸಿಟ್ಟಿನಲ್ಲಿ ಅವರು ಸೋಷಿಯಲ್ ಮೀಡಿಯಾದಲ್ಲಿ ‘ಕರ್ಮ ಮರಳಿ ಬರುತ್ತದೆ. ಅದು ತಡವಾಗಬಹುದು, ಆದರೆ ಬರದೇ ಬಿಡಲ್ಲ’ ಎಂದು ಪೋಸ್ಟ್ ಬರೆದುಕೊಂಡಿದ್ದರು. ಇದನ್ನು ಅವರ ಪತ್ನಿ ಕೂಡಾ ಶೇರ್ ಮಾಢಿದ್ದಾರೆ.

ಇದರ ಬೆನ್ನಲ್ಲೇ ಜಡೇಜಾ ಮತ್ತು ಧೋನಿ ನಡುವೆ ಮತ್ತೆ ಭಿನ್ನಾಭಿಪ್ರಾಯವಾಗಿದೆ ಎಂಬ ಮಾತು ಕೇಳಿಬಂದಿದೆ. ಕಳೆದ ಐಪಿಎಲ್ ಸೀಸನ್ ಮುಗಿದ ಬಳಿಕ ಜಡೇಜಾ ತಂಡ ಬಿಡುತ್ತಾರೆ ಎಂದು ಸುದ್ದಿಯಾಗಿತ್ತು. ಆದರೆ ಬಳಿಕ ಜಡೇಜಾ ಮನವೊಲಿಸಿ ತಂಡದಲ್ಲೇ ಉಳಿಸಿಕೊಳ್ಳಲಾಗಿತ್ತು. ಕಳೆದ ಸೀಸನ್ ನಲ್ಲಿ ಜಡೇಜಾರನ್ನು ನಾಯಕರಾಗಿ ಮಾಡಲಾಗಿತ್ತು. ಆದರೆ ತಂಡದ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಅವರಿಂದ ನಾಯಕತ್ವ ಕಿತ್ತುಕೊಂಡು ಮತ್ತೆ ಧೋನಿಗೇ ನಾಯಕತ್ವ ನೀಡಲಾಗಿತ್ತು. ಇದರ ಬಳಿಕ ಅಸಮಾಧಾನ ಭುಗಿಲೆದ್ದಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments