Webdunia - Bharat's app for daily news and videos

Install App

ಅಂಬಟಿ ರಾಯುಡುಗೆ ಆರ್ ಸಿಬಿ ಎಂದರೆ ಇಷ್ಟು ಸದರ ಆಗೋಯ್ತಾ: ಇದೆಂಥಾ ಜೋಕ್ (ವಿಡಿಯೋ)

Krishnaveni K
ಗುರುವಾರ, 13 ಮಾರ್ಚ್ 2025 (10:48 IST)
ಬೆಂಗಳೂರು: ಆರ್ ಸಿಬಿ ಈ ಬಾರಿ ಎರಡನೇ ಕ್ವಾಲಿಫೈಯರ್ ಗೆ ಬರುತ್ತೆ ಬಿಡಿ... ಹೀಗಂತ ಸಿಎಸ್ ಕೆ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಅಂಬಟಿ ರಾಯುಡು ಜೋಕ್ ಮಾಡಿದ್ದಾರೆ. ಅವರ ಜೋಕ್ ನೋಡಿದರೆ ಆರ್ ಸಿಬಿ ಎಂದರೆ ಇಷ್ಟು ಸದರ ಆಗೋಯ್ತಾ ಎಂದು ಆಕ್ರೋಶ ಹೊರಬರಬಹುದು.

ವೀಕ್ಷಕ ವಿವರಣೆ ಮಾಡುತ್ತಿದ್ದಾಗ ಈ ಬಾರಿ ಯಾರು ಚಾಂಪಿಯನ್ ಆಗುತ್ತಾರೆ, ಯಾವ ತಂಡ ಯಾವ ರೀತಿ ಪ್ರದರ್ಶನ ನೀಡಬಹುದು ಎಂದು ಚರ್ಚೆ ನಡೆಯುತ್ತಿತ್ತು. ಈ ವೇಳೆ ಆರ್ ಸಿಬಿ ಒಮ್ಮೆಯೂ ಟೈಟಲ್ ವಿನ್ ಆಗದೇ ಇರುವ ಬಗ್ಗೆ ಮಾತು ಬಂತು. ಇಷ್ಟು ದೊಡ್ಡ ಫ್ಯಾನ್ ಬೇಸ್ ಇದ್ದೂ ಆರ್ ಸಿಬಿಗೆ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಮಾತು ಬಂತು. ಈ ಸಾರಿ ಆರ್ ಸಿಬಿ ಪ್ರದರ್ಶನ ಸುಧಾರಿಸಬಹುದು ಎಂದು ಸಂಜಯ್ ಬಂಗಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವೇಳೆ ಜೋಕ್ ಮಾಡಿದ ಅಂಬಟಿ ರಾಯುಡು ‘ಹೌದು ಹೌದು. ಆರ್ ಸಿಬಿ ಈ ಬಾರಿ ಇನ್ನೊಂದು ತಡೆಗೋಡೆ ದಾಟಬಹುದು. ಮುಂದಿನ ಸಾರಿ ಆರ್ ಸಿಬಿ ಎರಡನೇ ಕ್ವಾಲಿಫೈಯರ್ ಗೆ ಏರಬಹುದು’ ಎಂದು ತಮಾಷೆ ಮಾಡಿದ್ದಾರೆ.

ಆಗ ಸಂಜಯ್ ಬಂಗಾರ್ ‘ಇಷ್ಟು ಕೇವಲವಾಗಿ ಮಾತನಾಡುವುದು ಸರಿಯಲ್ಲ. ಆರ್ ಸಿಬಿ ಅಭಿಮಾನಿಗಳು ನಿಮ್ಮನ್ನು ಗಮನಿಸುತ್ತಿರುತ್ತಾರೆ’ ಎಂದಿದ್ದಾರೆ. ಇದಕ್ಕೆ ರಾಯುಡು ‘ನೋಡಲಿ ಬಿಡಿ’ ಎಂದು ಉದ್ಧಟತನ ಮೆರೆದಿದ್ದಾರೆ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದ್ದು ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ. ಒಬ್ಬರಂತೂ ಇವರ ಈ ದುರಹಂಕಾರಕ್ಕೇ ಧೋನಿ ಸಿಎಸ್ ಕೆ ತಂಡದಿಂದ ಹೊರಹಾಕಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments