ವಿಜಯೋತ್ಸವದ ವೇಳೆ ಪ್ರಾಣ ಚೆಲ್ಲಿದ RCB ಕಟ್ಟಾ ಅಭಿಮಾನಿ, ಕುಟುಂಬದ ಪರಿಸ್ಥಿತಿ ಕೇಳಿದ್ರೆ ಕಣ್ಣೀರು ಬರುತ್ತೇ

Sampriya
ಬುಧವಾರ, 4 ಜೂನ್ 2025 (13:31 IST)
Photo Credit X
ಮೂಡಲಗಿ: ಐಪಿಎಲ್‌ 2025ರ ಟ್ರೋಪಿಯನ್ನು ಆರ್‌ಸಿಬಿ ಗೆಲ್ಲುತ್ತಿದ್ದ ಹಾಗೆಯೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಆರ್‌ಸಿಬಿ ಅಭಿಮಾನಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 

ಆರ್‌ಸಿಬಿ ಕಟ್ಟಾ ಅಭಿಮಾನಿಯಾಗಿದ್ದ ಮಂಜುನಾಥ ಈರಪ್ಪ ಕಂಬಾರ (28) ಸಾವಿಗೀಡಾದವರು.

 ಅವರಾದಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಕುಣಿಯುತ್ತಲೇ ಅವರು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನ ಗೆಳೆಯರು ಹತ್ತಿರದ ಮಹಾಲಿಂಗಪೂರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆತನನ್ನು ಉಳಿಸಿಕೊಳ್ಳಲು
ಸಾಧ್ಯವಾಗಲಿಲ್ಲ. 

ಆರ್‌ಸಿಬಿ ತಂಡದ ಹುಟ್ಟು ಅಭಿಮಾನಿಯಾಗಿರುವ ಮಂಜುಣಾಥ್‌ ಫೈನಲ್‌ ಪಂದ್ಯ ವೀಕ್ಷಣೆಗೆ ಮಂಗಳವಾರ ಬೃಹತ್‌ ಎಲ್‌ಇಡಿ ಪರದೆಯ ವ್ಯವಸ್ಥೆಯನ್ನು ಅವರೇ ಮಾಡಿದ್ದರು. ಇದಕ್ಕಾಗಿ ನಾಲ್ಕು ದಿನಗಳಿಂದ ಊಟ, ನಿದ್ದೆ ಬಿಟ್ಟು ಓಡಾಡಿದ್ದರು. ಪಟಾಕಿ, ಗುಲಾಲು ಎಲ್ಲವನ್ನು ಖರೀದಿಸಿ ತಂದಿದ್ದರು.

ಗ್ರಾಮದಲ್ಲಿ ‘ಅವರಾದಿ ವಾರಿಯರ್ಸ್‌’ ಎಂಬ ತಂಡ ಕಟ್ಟಿಕೊಂಡು ಟೂರ್ನಿಗಳಲ್ಲಿ ಭಾಗವಹಿಸುತ್ತಿದ್ದರು. ನೆಚ್ಚಿನ ತಂಡ ಕಪ್‌ ಗೆದ್ದಿದ್ದನ್ನು ಕಂಡು ಯುವಕರು ಹುಚ್ಚೆದ್ದು ಕುಣಿದಾಡಿದರು. ಮಂಜುನಾಥ ಕೂಡ ಮೈ ಮರೆತು ಸಂಭ್ರಮಿಸುವಾಗಲೇ ಹೃದಯ ಸ್ತಂಭನವಾಗಿದೆ.

ಮಂಜುನಾಥಗೆ 6 ತಿಂಗಳ ಹೆಣ್ಣ ಮಗು ಇದೆ. ಪತ್ನಿ ಮತ್ತೆ ಗರ್ಭಿಣಿಯಾಗಿದ್ದಾರೆ. ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ತಂದೆ ಈರಪ್ಪ ಕೃಷಿ ಮಾಡಿಕೊಂಡಿದ್ಬಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments