Webdunia - Bharat's app for daily news and videos

Install App

Anil Kumble: ತಮನ್ನಾಗೆ 6 ಕೋಟಿ, ಅರಣ್ಯ ಇಲಾಖೆ ರಾಯಭಾರಿ ಅನಿಲ್ ಕುಂಬ್ಳೆ ಸಂಭಾವನೆ ನಿಜಕ್ಕೂ ಶಾಕಿಂಗ್

Krishnaveni K
ಬುಧವಾರ, 28 ಮೇ 2025 (10:12 IST)
ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಗೆ ರಾಜ್ಯ ಸರ್ಕಾರ 6 ಕೋಟಿ ಕೊಟ್ಟು ಪರಭಾಷಾ ನಟಿ ತಮನ್ನಾ ಭಾಟಿಯಾರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಆದರೆ ನಮ್ಮ ಅಪ್ಪಟ ಕನ್ನಡ ಪ್ರತಿಭೆ ಅನಿಲ್ ಕುಂಬ್ಳೆಯವರನ್ನು ಅರಣ್ಯ ಇಲಾಖೆ ರಾಯಭಾರಿಯಾಗಿ ನೇಮಕ ಮಾಡಲಾಗಿದ್ದು, ಅವರು ಪಡೆಯಲಿರುವ ಸಂಭಾವನೆ ವಿಚಾರ ತಿಳಿದ್ರೆ ಶಾಕ್ ಆಗ್ತೀರಿ.

ಕನ್ನಡಿಗ ಅನಿಲ್ ಕುಂಬ್ಳೆಗೆ ಮೊದಲಿನಿಂದಲೂ ಫೋಟೋಗ್ರಫಿ, ವನ್ಯಜೀವಿಗಳೆಂದರೆ ಆಸಕ್ತಿ. ಇದೀಗ ಹೆಮ್ಮೆಯ ಕ್ರಿಕೆಟಿಗನನ್ನು ಅರಣ್ಯ ಇಲಾಖೆಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಇದು ಕನ್ನಡಿಗರಿಗೆ ತುಂಬಾ ಖುಷಿ ತಂದಿದೆ. ಇದರ ನಡುವೆ ಇನ್ನೊಂದು ಇಂಟ್ರೆಸ್ಟಿಂಗ್ ವಿಚಾರವೂ ಕೇಳಿಬಂದಿದೆ.

ಅನಿಲ್ ಕುಂಬ್ಳೆ ಈ ಕೆಲಸಕ್ಕೆ ಒಂದೇ ಒಂದು ರೂಪಾಯಿ ಸಂಭಾವನೆಯನ್ನೂ ತೆಗೆದುಕೊಳ್ಳುವುದಿಲ್ಲವಂತೆ. ಅನಿಲ್ ಕುಂಬ್ಳೆಗೆ ವನ್ಯಜೀವಿಗಳ ಬಗ್ಗೆ, ಅರಣ್ಯ ಸಂರಕ್ಷಣೆ ಬಗ್ಗೆ ಅಪಾರ ಕಾಳಜಿಯಿದೆ. ಈ ಕಾರಣಕ್ಕೆ ಅವರು ಒಂದೇ ಒಂದು ರೂಪಾಯಿ ಸಂಭಾವನೆ ಪಡೆಯದೇ ಕೆಲಸ ಮಾಡಲು ಒಪ್ಪಿದ್ದಾರಂತೆ.

ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿರುವ ತಮನ್ನಾಗೆ 6 ಕೋಟಿ ಸಂಭಾವನೆ ನೀಡಲಾಗಿದೆ. ಈ ನಡುವೆ ನಮ್ಮದೇ ಕನ್ನಡ ಪ್ರತಿಭೆ ಅನಿಲ್ ಕುಂಬ್ಳೆ ಸಂಭಾವನೆಯಿಲ್ಲದೇ ಸೇವೆ ಮಾಡಲು ಮುಂದಾಗಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments