Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಗ್ಗೆ ಅನಿಲ್ ಕುಂಬ್ಳೆ ಹೇಳಿದ್ದು ಕೇಳಿ ಫುಲ್ ಶಾಕ್ ಆದ ಕ್ರಿಕೆಟ್ ಲೋಕ!

Webdunia
ಸೋಮವಾರ, 24 ಡಿಸೆಂಬರ್ 2018 (10:01 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನಿಲ್ ಕುಂಬ್ಳೆ ಸಂಬಂಧ ಹೇಗಿತ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಕೋಚ್ ಆಗಿದ್ದ ಕುಂಬ್ಳೆ ರಾಜೀನಾಮೆ ಕೊಡಲು ಕೊಹ್ಲಿಯ ಕುಮ್ಮಕ್ಕೇ ಕಾರಣ ಎಂಬುದು ಇದೀಗ ರಹಸ್ಯವಾಗಿ ಉಳಿದಿಲ್ಲ.


ಆದರೆ ಕುಂಬ್ಳೆ ಮಾತ್ರ ಈ ಕಹಿ ಘಟನೆಯ ನಂತರವೂ ಕೊಹ್ಲಿ-ಅನುಷ್ಕಾ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿ ಅಚ್ಚರಿ ಮೂಡಿಸಿದ್ದರು. ಇದೀಗ ಕೊಹ್ಲಿ ಬಗ್ಗೆ ಅನಿಲ್ ಕುಂಬ್ಳೆ ನೀಡಿರುವ ಹೊಗಳಿಕೆ ಕೇಳಿ ಕ್ರಿಕೆಟ್ ಲೋಕ ಮತ್ತೊಮ್ಮೆ ಕುಂಬ್ಳೆಯ ಜಂಟಲ್ ಮ್ಯಾನ್ ವ್ಯಕ್ತಿತ್ವಕ್ಕೆ ಬೆರಗಾಗಿದೆ.

‘ಪ್ರತೀ ಪಂದ್ಯದಿಂದ ಪಂದ್ಯಕ್ಕೆ ಕೊಹ್ಲಿ ಪ್ರೌಢ ಆಟಗಾರನಾಗಿ ಬೆಳೆಯುತ್ತಿದ್ದಾರೆ. ತಾವು ಬ್ಯಾಟಿಂಗ್ ಮಾಡುವಾಗ ಇಡೀ ಪಂದ್ಯವನ್ನೇ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವುದು ಹೇಗೆ ಎಂದು ಅವರಿಗೆ ಗೊತ್ತು. ಎಲ್ಲವನ್ನೂ ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳುವ ಸಾಮರ್ಥ್ಯ ಅವರಲ್ಲಿದೆ’ ಎಂದು ಕುಂಬ್ಳೆ ಹೊಗಳಿದ್ದಾರೆ.

ಕುಂಬ್ಳೆ-ಕೊಹ್ಲಿ ವೈಮನಸ್ಯದ ಬಳಿಕ ಕೊಹ್ಲಿ ಕುಂಬ್ಳೆಯನ್ನು ಟ್ವಿಟರ್ ನಲ್ಲಿ ಅನ್ ಫಾಲೋ ಮಾಡಿದ್ದಲ್ಲದೆ, ಹಿಂದೊಮ್ಮೆ ಭಾರತದ ಶ್ರೇಷ್ಠ ಆಟಗಾರರ ಹೆಸರನ್ನು ಹೆಸರಿಸುವಾಗ ಬೇಕೆಂದೇ ಕುಂಬ್ಳೆ ಹೆಸರನ್ನು ಹೇಳದೇ ತಮ್ಮ ಅಸಮಾಧಾನ ಸೂಚಿಸಿದ್ದರು. ಆದರೆ ಕುಂಬ್ಳೆ ಮಾತ್ರ ತಮ್ಮ ನಡುವಿನ ವೈಮನಸ್ಯವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳದೇ ಪ್ರೌಢಿಮೆ ಮೆರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಈ ರೀತಿ ಆಡುವುದು ಇದೇ ಫಸ್ಟ್

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಮಾತ್ರ ಏನು ಸ್ಪೆಷಲ್ಲಾ.. ಲಂಡನ್ ವಾಸಿ ಕೊಹ್ಲಿಗೆ ಅಲ್ಲಿಯೇ ಫಿಟ್ನೆಸ್ ಟೆಸ್ಟ್

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನಕ್ಕೆ ಹೆಚ್ಚಿದ ಒತ್ತಡ: ಇಂದು ಸಿಎಂ ಭೇಟಿ ಮಾಡಲಿರುವ ಭಾರತಿ ವಿಷ್ಣುವರ್ಧನ್

ಮುಂದಿನ ಸುದ್ದಿ
Show comments