ರಾಮಮಂದಿರ ಆಹ್ವಾನ ಪತ್ರಿಕೆ ಹಿಡಿದಿರುವ ಅನುಷ್ಕಾ ಶರ್ಮಾ ಹೊಟ್ಟೆ ಮೇಲೆಯೇ ಎಲ್ಲರ ಕಣ್ಣು!

Krishnaveni K
ಬುಧವಾರ, 17 ಜನವರಿ 2024 (09:39 IST)
Photo Courtesy: Twitter
ಮುಂಬೈ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾಗೆ ಆಹ್ವಾನ ಪತ್ರಿಕೆ ನೀಡಿದೆ.

ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಗಣ್ಯಾತಿಗಣ್ಯರನ್ನು ಖುದ್ದಾಗಿ ರಾಮಜನ್ಮಭೂಮಿ ಟ್ರಸ್ಟ್ ಮನೆಗೆ ತೆರಳಿ ಆಹ್ವಾನ ಪತ್ರಿಕೆ ವಿತರಿಸುತ್ತಿದೆ. ಇದೀಗ ಕೊಹ್ಲಿ ದಂಪತಿಯ ನಿವಾಸಕ್ಕೆ ಭೇಟಿ ನೀಡಿ ಅವರನ್ನೂ ಆಹ್ವಾನಿಸಿದ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟವಾಗಿದೆ.

ಆದರೆ ಈ ಫೋಟೋದಲ್ಲಿ ಎಲ್ಲರ ಕಣ್ಣು ಅನುಷ್ಕಾ ಹೊಟ್ಟೆ ಮೇಲೆಯೇ ಇದೆ. ಕಳೆದ ಕೆಲವು ಸಮಯದಿಂದ ಅನುಷ್ಕಾ ಎರಡನೇ ಬಾರಿಗೆ ತಾಯಿಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೇ ಇದೆ. ಆದರೆ ದಂಪತಿ ಈ ಸುದ್ದಿಯನ್ನು ಒಪ್ಪಿಕೊಂಡೂ ಇಲ್ಲ, ಅಲ್ಲಗಳೆದೂ ಇಲ್ಲ.

ಆಗಾಗ ಕೊಹ್ಲಿ ಕೌಟುಂಬಿಕ ಕಾರಣ ನೀಡಿ ಮನೆಗೆ ತೆರಳುತ್ತಿರುವುದನ್ನು ನೋಡಿದರೆ ಇದು ಪಕ್ಕಾ ಎನಿಸುತ್ತದೆ. ಇದರ ಜೊತೆಗೆ ಅನುಷ್ಕಾ ಇತ್ತೀಚೆಗೆ ಹೊರಗೆಲ್ಲೂ ಕಾಣಿಸುವುದು ಅಪರೂಪವಾಗಿದೆ. ಕಾಣಿಸಿಕೊಂಡರೂ ಹೆಚ್ಚಾಗಿ ಸಡಿಲ ಉಡುಗೆ ಧರಿಸಿ ಉಬ್ಬು ಹೊಟ್ಟೆ ಕಾಣದಂತೆ ಮರೆಮಾಚುತ್ತಿರುವುದು ಅನುಮಾನ ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

ಮುಂದಿನ ಸುದ್ದಿ
Show comments