ಸಚಿನ್ ತೆಂಡುಲ್ಕರ್ ಪುತ್ರನಿಗೆ ಮಾತ್ರ ಯಾಕೆ ಈ ಸ್ಪೆಷಲ್ ಟ್ರೀಟ್ ಮೆಂಟ್? ವಿವಾದದಲ್ಲಿ ಅರ್ಜುನ್!

Webdunia
ಗುರುವಾರ, 28 ಜೂನ್ 2018 (09:03 IST)
ಲಂಡನ್: ಅಂಡರ್ 19 ತಂಡಕ್ಕೆ ಆಯ್ಕೆಯಾಗಿರುವ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ಟೀಂ ಇಂಡಿಯಾ ಆಟಗಾರರಿಗೆ ಐರ್ಲೆಂಡ್ ನಲ್ಲಿ ನೆಟ್ ನಲ್ಲಿ ಬೌಲಿಂಗ್ ಮಾಡಿದ್ದು ಭಾರೀ ಸುದ್ದಿಯಾಗಿತ್ತು.
 

ಆದರೆ ಆ ವಿಚಾರವೇ ಇದೀಗ ವಿವಾದಕ್ಕೆ ಕಾರಣವಾಗಿದೆ. ಸಚಿನ್ ಪುತ್ರನಿಗೆ ಟೀಂ ಇಂಡಿಯಾ ಆಟಗಾರರಿಗೆ ಬೌಲಿಂಗ್ ಮಾಡಲು ಅವಕಾಶ ನೀಡಿದ್ದಷ್ಟೇ ಅಲ್ಲ, ಕೋಚ್ ರವಿಶಾಸ್ತ್ರಿಯಿಂದ ಟಿಪ್ಸ್ ಕೂಡಾ ಸಿಕ್ಕಿತ್ತು. ಈ ಫೋಟೋವನ್ನು ಬಿಸಿಸಿಐ ಟ್ವಿಟರ್ ನಲ್ಲಿ ಪ್ರಕಟಿಸಿದ್ದಕ್ಕೆ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.

ಅಂಡರ್ 19 ತಂಡದಲ್ಲಿ ಅರ್ಜುನ್ ಹೊರತಾಗಿ ಬೇರೆ ಆಟಗಾರರು ಇದ್ದರು. ಅವರಿಗೂ ಯಾಕೆ ಈ ಅವಕಾಶ ನೀಡಲಿಲ್ಲ? ಕೇವಲ ಸಚಿನ್ ಪುತ್ರನಿಗೆ ಮಾತ್ರ ಯಾಕೆ ಸುವರ್ಣಾವಕಾಶ ನೀಡಲಾಯಿತು ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ವಂಶಪಾರಂಪರ್ಯ ಎನ್ನುವುದು ಭಾರತೀಯ ಕ್ರಿಕೆಟ್ ಗೂ ಕಾಲಿಟ್ಟಿತೇ ಎಂದು ಕೆಲವರು ಖಾರವಾಗಿ ಪ್ರಶ್ನಿಸಿದ್ದಾರೆ.  ಹಿಂದೊಮ್ಮೆ ಸಚಿನ್ ಪುತ್ರನನ್ನು ಬಿಸಿಸಿಐ ತನ್ನ ಕಿರಿಯರ ತಂಡಕ್ಕೆ ಆಯ್ಕೆ ಮಾಡಿದಾಗ ಸಚಿನ್ ಪುತ್ರ ಎಂಬ ಕಾರಣಕ್ಕೆ ಆತನಿಗೆ ಅವಕಾಶ ನೀಡಲಾಗಿದೆ ಎಂದು ವಿವಾದವೆದ್ದಿತ್ತು. ಇದೀಗ ಮತ್ತೆ ಅಂತಹದ್ದೇ ವಿವಾದ ಸೃಷ್ಟಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಮಾತ್ರ ಬೇಡಪ್ಪ.. ಟೀಂ ಇಂಡಿಯಾ ಕೋಚ್ ಗೆ ಐರ್ಲೆಂಡ್ ನಿಂದ ಎಂಥಾ ಅವಮಾನ

ICC Women’s T20 WC: ಭಾರತ ವನಿತೆಯರ ಸೋಲಿಗೆ ಇದೇ ಮೂರು ಕಾರಣ

ಸ್ಟಾರ್ ಸಂಸ್ಕೃತಿ ಕೊನೆಗಾಣಿಸ್ತೀನಿ ಎಂದು ಬಂದು ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಲ್ಲೋ ಗಂಭೀರ್, ಅಗರ್ಕರ್

T20 World Cup: ಹೀನಾಯ ಸೋಲಿನೊಂದಿಗೆ ಗುಂಪು ಹಂತದಲ್ಲೇ ಹೊರಬಿದ್ದ ಭಾರತದ ವನಿತೆಯರು

INDW vs AUSW: ಆಸ್ಟ್ರೇಲಿಯಾ ವಿರುದ್ಧ ತಾನು ಸಿಂಹಿಣಿಯೇ ಎಂದು ಪ್ರೂವ್ ಮಾಡಿದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments