Webdunia - Bharat's app for daily news and videos

Install App

ಅಪ್ಪನಂತೆ ತಾನು ಶಾಂತಮೂರ್ತಿಯಲ್ಲ ಎಂದು ತೋರಿಸಿಕೊಟ್ಟ ಅರ್ಜುನ್ ತೆಂಡುಲ್ಕರ್

Krishnaveni K
ಶನಿವಾರ, 18 ಮೇ 2024 (11:17 IST)
Photo Courtesy: Twitter
ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಅವರ ಅಗ್ರೆಷನ್ ನೋಡಿ ಅಪ್ಪನಂತಲ್ಲ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಸಚಿನ್ ತೆಂಡುಲ್ಕರ್ ಮೈದಾನದಲ್ಲಿ ಎದುರಾಳಿ ಆಟಗಾರರ ಮುಂದೆ ಆಕ್ರಮಣಕಾರಿ ವರ್ತನೆ ತೋರಿದವರಲ್ಲ. ಎದುರಾಳಿಗಳೇ ಕೆಣಕಿದರೂ ತಮ್ಮ ನಗುತ್ತಲೇ ತಲೆಯಾಡಿಸಿ ತಮ್ಮ ಆಟದ ಮೇಲಷ್ಟೇ ಗಮನ ಕೊಡುತ್ತಿದ್ದರು. ಅವರನ್ನು ಸ್ಲೆಡ್ಜಿಂಗ್ ಮಾಡಲು ಬಂದರೂ ಬ್ಯಾಟ್ ಮೂಲಕವಷ್ಟೇ ಉತ್ತರ ಕೊಡುತ್ತಿದ್ದರು.

ಆದರೆ ಪುತ್ರ ಅರ್ಜುನ್ ತಾನು ಅಪ್ಪನಂತೆ ಶಾಂತ ಮೂರ್ತಿಯಲ್ಲ ಎಂದು ನಿನ್ನೆಯ ಪಂದ್ಯದಲ್ಲಿ ತೋರಿಸಿಕೊಟ್ಟರು. ವೇಗದ ಬೌಲಿಂಗ್ ಮಾಡುವ ಅರ್ಜುನ್ ತೆಂಡುಲ್ಕರ್ ಬಾಲ್ ಮಾಡಿದ ಬಳಿಕ ಕ್ರೀಸ್ ಬಿಟ್ಟು ನಿಂತಿದ್ದ ಲಕ್ನೋ ಬ್ಯಾಟಿಗ ಮಾರ್ಕ್ ಸ್ಟಾಯ್ನಿಸ್ ನತ್ತ ಚೆಂಡು ಎಸೆಯುವಂತೆ ಎಚ್ಚರಿಸಿ ದಿಟ್ಟಿಸಿ ನೋಡಿದ್ದಾರೆ.

ಅವರ ಈ ಅಗ್ರೆಷನ್ ನೋಡಿ ಸ್ಟಾಯ್ನಿಸ್ ಕೂಡಾ ಅಚ್ಚರಿಪಟ್ಟಿದ್ದಾರೆ. ಇಷ್ಟು ದಿನ ಬೆಂಚ್ ಕಾಯಿಸಿದ್ದ ಅರ್ಜುನ್ ತೆಂಡುಲ್ಕರ್ ಇದೇ ಮೊದಲ ಬಾರಿಗೆ ಈ ಐಪಿಎಲ್ ನಲ್ಲಿ ಆಡುವ ಅವಕಾಶ ಪಡೆದಿದ್ದರು. ಇದಕ್ಕಿಂತ ಮೊದಲು ಅವರು ಐಪಿಎಲ್ ನಲ್ಲಿ ನಾಲ್ಕು ಪಂದ್ಯಗಳನ್ನಾಡಿ ನಾಲ್ಕು ವಿಕೆಟ್ ಕಬಳಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments