Webdunia - Bharat's app for daily news and videos

Install App

ಬೆಂಗಳೂರು ಬಿಟ್ಟು ದುಬೈನಲ್ಲಿರುವ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಅರೆಸ್ಟ್ ವಾರೆಂಟ್

Krishnaveni K
ಶನಿವಾರ, 21 ಡಿಸೆಂಬರ್ 2024 (10:45 IST)
ಬೆಂಗಳೂರು: ಕರ್ನಾಟಕ ಮೂಲದ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಪ್ರಕರಣವೊಂದರಲ್ಲಿ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.

ರಾಬಿನ್ ಉತ್ತಪ್ಪ ಬೆಂಗಳೂರಿನಲ್ಲಿ ತಮ್ಮದೇ ಒಂದು ಕಂಪನಿ ನಡೆಸುತ್ತಿದ್ದಾರೆ. ಸೆಂಚುರಿಸ್ ಲೈಫ್ ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಎನ್ನುವ ಕಂಪನಿ ಇದಾಗಿದ್ದು, ಈ ಸಂಸ್ಥೆಯ ಉದ್ಯೋಗಿಗಳಿಗೆ ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಕಂಪನಿಯ ಉದ್ಯೋಗಿಗಳ ವೇತನದಿಂದ ಪಿಎಫ್ ಹಣ ಕಡಿತ ಮಾಡಿ ಅವರ ಖಾತೆಗೆ ಹಣ ಹಾಕದೇ ವಂಚಿಸಿದ್ದಾರೆ ಎಂಬುದು ಆರೋಪ.

ಸುಮಾರು 23 ಲಕ್ಷ ರೂ.ಗಳಷ್ಟು ಹಣವನ್ನು ಉದ್ಯೋಗಿಗಳಿಗೆ ನೀಡದೇ ರಾಬಿನ್ ಉತ್ತಪ್ಪ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರ ವಿರುದ್ಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅವರನ್ನು ಬಂಧಿಸಲು ವಾರೆಂಟ್ ಜಾರಿಯಾಗಿದೆ. ಇತ್ತೀಚೆಗಷ್ಟೇ ಉತ್ತಪ್ಪ ಸಂದರ್ಶನವೊಂದರಲ್ಲಿ ಬೆಂಗಳೂರಿನ ಟ್ರಾಫಿಕ್ ನಲ್ಲಿ ನನ್ನ ಮಕ್ಕಳು ಜೀವನದ ಸಮಯವನ್ನೆಲ್ಲಾ ಕಳೆಯುವುದು ಬೇಡವೆನಿಸಿತು. ಆ ಕಾರಣಕ್ಕೆ ದುಬೈಗೆ ಶಿಫ್ಟ್ ಆಗಿದ್ದೇನೆ ಎಂದಿದ್ದರು. ಅವರ ಈ ಹೇಳಿಕೆಗೆ ನೆಟ್ಟಿಗರಿಂದ ಟೀಕೆ ಎದುರಾಗಿತ್ತು. ಇದೀಗ ತಮ್ಮ ಕಂಪನಿಯ ಉದ್ಯೋಗಿಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments