Webdunia - Bharat's app for daily news and videos

Install App

ಬೆಂಗಳೂರು ಬಿಟ್ಟು ದುಬೈನಲ್ಲಿರುವ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಅರೆಸ್ಟ್ ವಾರೆಂಟ್

Krishnaveni K
ಶನಿವಾರ, 21 ಡಿಸೆಂಬರ್ 2024 (10:45 IST)
ಬೆಂಗಳೂರು: ಕರ್ನಾಟಕ ಮೂಲದ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಪ್ರಕರಣವೊಂದರಲ್ಲಿ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.

ರಾಬಿನ್ ಉತ್ತಪ್ಪ ಬೆಂಗಳೂರಿನಲ್ಲಿ ತಮ್ಮದೇ ಒಂದು ಕಂಪನಿ ನಡೆಸುತ್ತಿದ್ದಾರೆ. ಸೆಂಚುರಿಸ್ ಲೈಫ್ ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಎನ್ನುವ ಕಂಪನಿ ಇದಾಗಿದ್ದು, ಈ ಸಂಸ್ಥೆಯ ಉದ್ಯೋಗಿಗಳಿಗೆ ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಕಂಪನಿಯ ಉದ್ಯೋಗಿಗಳ ವೇತನದಿಂದ ಪಿಎಫ್ ಹಣ ಕಡಿತ ಮಾಡಿ ಅವರ ಖಾತೆಗೆ ಹಣ ಹಾಕದೇ ವಂಚಿಸಿದ್ದಾರೆ ಎಂಬುದು ಆರೋಪ.

ಸುಮಾರು 23 ಲಕ್ಷ ರೂ.ಗಳಷ್ಟು ಹಣವನ್ನು ಉದ್ಯೋಗಿಗಳಿಗೆ ನೀಡದೇ ರಾಬಿನ್ ಉತ್ತಪ್ಪ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರ ವಿರುದ್ಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅವರನ್ನು ಬಂಧಿಸಲು ವಾರೆಂಟ್ ಜಾರಿಯಾಗಿದೆ. ಇತ್ತೀಚೆಗಷ್ಟೇ ಉತ್ತಪ್ಪ ಸಂದರ್ಶನವೊಂದರಲ್ಲಿ ಬೆಂಗಳೂರಿನ ಟ್ರಾಫಿಕ್ ನಲ್ಲಿ ನನ್ನ ಮಕ್ಕಳು ಜೀವನದ ಸಮಯವನ್ನೆಲ್ಲಾ ಕಳೆಯುವುದು ಬೇಡವೆನಿಸಿತು. ಆ ಕಾರಣಕ್ಕೆ ದುಬೈಗೆ ಶಿಫ್ಟ್ ಆಗಿದ್ದೇನೆ ಎಂದಿದ್ದರು. ಅವರ ಈ ಹೇಳಿಕೆಗೆ ನೆಟ್ಟಿಗರಿಂದ ಟೀಕೆ ಎದುರಾಗಿತ್ತು. ಇದೀಗ ತಮ್ಮ ಕಂಪನಿಯ ಉದ್ಯೋಗಿಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India New Test Captain: ಹರಿದಾಡುತ್ತಿರುವ ಹೆಸರುಗಳಲ್ಲಿ ಇವರೇ ನಾಯಕನಾಗುವುದು ಪಕ್ಕಾ ಅಂತೇ

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ಮುಂಬೈ ಇಂಡಿಯನ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments