ಬೆಂಗಳೂರು ಬಿಟ್ಟು ದುಬೈನಲ್ಲಿರುವ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಅರೆಸ್ಟ್ ವಾರೆಂಟ್

Krishnaveni K
ಶನಿವಾರ, 21 ಡಿಸೆಂಬರ್ 2024 (10:45 IST)
ಬೆಂಗಳೂರು: ಕರ್ನಾಟಕ ಮೂಲದ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಪ್ರಕರಣವೊಂದರಲ್ಲಿ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.

ರಾಬಿನ್ ಉತ್ತಪ್ಪ ಬೆಂಗಳೂರಿನಲ್ಲಿ ತಮ್ಮದೇ ಒಂದು ಕಂಪನಿ ನಡೆಸುತ್ತಿದ್ದಾರೆ. ಸೆಂಚುರಿಸ್ ಲೈಫ್ ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಎನ್ನುವ ಕಂಪನಿ ಇದಾಗಿದ್ದು, ಈ ಸಂಸ್ಥೆಯ ಉದ್ಯೋಗಿಗಳಿಗೆ ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಕಂಪನಿಯ ಉದ್ಯೋಗಿಗಳ ವೇತನದಿಂದ ಪಿಎಫ್ ಹಣ ಕಡಿತ ಮಾಡಿ ಅವರ ಖಾತೆಗೆ ಹಣ ಹಾಕದೇ ವಂಚಿಸಿದ್ದಾರೆ ಎಂಬುದು ಆರೋಪ.

ಸುಮಾರು 23 ಲಕ್ಷ ರೂ.ಗಳಷ್ಟು ಹಣವನ್ನು ಉದ್ಯೋಗಿಗಳಿಗೆ ನೀಡದೇ ರಾಬಿನ್ ಉತ್ತಪ್ಪ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರ ವಿರುದ್ಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅವರನ್ನು ಬಂಧಿಸಲು ವಾರೆಂಟ್ ಜಾರಿಯಾಗಿದೆ. ಇತ್ತೀಚೆಗಷ್ಟೇ ಉತ್ತಪ್ಪ ಸಂದರ್ಶನವೊಂದರಲ್ಲಿ ಬೆಂಗಳೂರಿನ ಟ್ರಾಫಿಕ್ ನಲ್ಲಿ ನನ್ನ ಮಕ್ಕಳು ಜೀವನದ ಸಮಯವನ್ನೆಲ್ಲಾ ಕಳೆಯುವುದು ಬೇಡವೆನಿಸಿತು. ಆ ಕಾರಣಕ್ಕೆ ದುಬೈಗೆ ಶಿಫ್ಟ್ ಆಗಿದ್ದೇನೆ ಎಂದಿದ್ದರು. ಅವರ ಈ ಹೇಳಿಕೆಗೆ ನೆಟ್ಟಿಗರಿಂದ ಟೀಕೆ ಎದುರಾಗಿತ್ತು. ಇದೀಗ ತಮ್ಮ ಕಂಪನಿಯ ಉದ್ಯೋಗಿಗಳಿಗೆ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

IND vs NZ: ಏಕದಿನ ಸರಣಿ ಕತೆ ಹಾಗಾಯ್ತು, ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ

ಮುಂದಿನ ಸುದ್ದಿ
Show comments