ಸೌತ್ ಆಫ್ರಿಕಾ ವಿರುದ್ಧ ಮೊದಲ ಏಕದಿನ ಗೆದ್ದ ಬಳಿಕ ಅರ್ಷ್ ದೀಪ್ ಸಿಂಗ್ ಕ್ಯಾಪ್ಟನ್ ರಾಹುಲ್ ಬಗ್ಗೆ ಹೇಳಿದ್ದೇನು?

Webdunia
ಸೋಮವಾರ, 18 ಡಿಸೆಂಬರ್ 2023 (08:58 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಭಾರತದ ಈ ಅಭೂತಪೂರ್ವ ಗೆಲುವಿನ ರೂವಾರಿಗಳು ಅರ್ಷ್ ದೀಪ್ ಸಿಂಗ್ ಮತ್ತು ಆವೇಶ್ ಖಾನ್. ಅರ್ಷ್ ದೀಪ್ 5, ಆವೇಶ್ ಖಾನ್ 4 ವಿಕೆಟ್ ಕಬಳಿಸಿ ಆಫ್ರಿಕಾವನ್ನು ಕೇವಲ 116 ರನ್ ಗಳಿಗೆ ಆಲೌಟ್ ಮಾಡಿದ್ದರು. ಈ ಮೊತ್ತ ಬೆನ್ನತ್ತಿದ ಭಾರತ 16.4 ಓವರ್ ಗಳಲ್ಲಿಯೇ 2 ವಿಕೆಟ್ ಕಳೆದುಕೊಂಡು 117 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಭಾರತದ ಪರ ಬ್ಯಾಟಿಂಗ್ ನಲ್ಲಿ ಚೊಚ್ಚಲ ಪಂದ್ಯವಾಡಿದ ಸಾಯಿ ಸುದರ್ಶನ್ ದಾಖಲೆಯ ಅರ್ಧಶತಕ (55) ಮತ್ತು ಶ್ರೇಯಸ್ ಅಯ್ಯರ್ 52 ರನ್ ಗಳಿಸಿದರು.

ಇದರೊಂದಿಗೆ ಈ ಗೆಲುವು ಆಫ್ರಿಕಾ ವಿರುದ್ಧ ಭಾರತಕ್ಕೆ ಏಕದಿನ ಪಂದ್ಯಗಳಲ್ಲಿ ಅತೀ ದೊಡ್ಡ ಗೆಲುವುಗಳಲ್ಲಿ ಒಂದಾಯಿತು. 5 ವಿಕೆಟ್ ಕಬಳಿಸಿದ ಅರ್ಷ್ ದೀಪ್ ಸಿಂಗ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ನಾಯಕ ಕೆಎಲ್ ರಾಹುಲ್ ಗೆ ಧನ್ಯವಾದ ಸಲ್ಲಿಸಿದರು. ನೀನು ಕಮ್ ಬ್ಯಾಕ್ ಮಾಡಲೇಬೇಕು, ಐದು ವಿಕೆಟ್ ಕೀಳಲೇಬೇಕು ಎಂದು ರಾಹುಲ್ ಭಾಯಿ ನನಗೆ ಹೇಳಿದ್ದರು. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments