Webdunia - Bharat's app for daily news and videos

Install App

Asia Cup Final: ಸ್ಪಿನ್ ಸುಳಿಗೆ ಪಾಕ್‌ ತತ್ತರ: ಭಾರತದ ಗೆಲುವಿಗೆ ಸಾಧಾರಣ ಸವಾಲು

Sampriya
ಭಾನುವಾರ, 28 ಸೆಪ್ಟಂಬರ್ 2025 (22:11 IST)
Photo Credit X
ದುಬೈ: ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬ್ಯಾಟರ್‌ಗಳು ಭಾರತದ ಸ್ಪಿನ್‌ ಸುಳಿಗೆ ತತ್ತರಿಸಿದರು.

ಆರಂಭಿಕ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಿದರೂ  ಭಾರತದ ಎದುರು ಬೃಹತ್‌ ಮೊತ್ತ ಕಲೆಹಾಕುವ ಪಾಕ್‌ ಪ್ರಯತ್ನ ಕೈಗೂಡಲಿಲ್ಲ. 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಸರ್ವಪತನ ಕಂಡಿದೆ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಪಂದ್ಯದಲ್ಲಿ, ಮಧ್ಯಮ ಹಾಗೂ ಕೆಳ ಕ್ರಮಾಂಕದ ಬ್ಯಾಟರ್‌ಗಳು ಸ್ಪಿನ್‌ ಸುಳಿಯಲ್ಲಿ ಸಿಲುಕಿದ ಪರಿಣಾಮ ದಿಢೀರ್‌ ಕುಸಿಯಿತು.

ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ ಬೌಲಿಂಗ್‌ ಆಯ್ದುಕೊಂಡರು. ಪಾಕ್‌ ಪಡೆಯ ಆರಂಭಿಕ ಬ್ಯಾಟರ್‌ಗಳಾದ ಸಾಹಿಬ್‌ಝಾದಾ ಫರ್ಹಾನ್ ಮತ್ತು ಫಖರ್‌ ಜಮಾನ್‌ ಭಾರತದ ನಾಯಕನ ನಿರ್ಧಾರವನ್ನು ತಲೆಕೆಳಗಾಗಿಸುವಂತಹ ಆಟವಾಡಿದರು.

ಈ ಜೋಡಿ ಮೊದಲ ವಿಕೆಟ್‌ಗೆ 9.4 ಓವರ್‌ಗಳಲ್ಲಿ 84 ರನ್‌ ಕಲೆಹಾಕುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟಿತು. ಆದರೆ, ಆ ಅಡಿಪಾಯದ ಮೇಲೆ ಬೃಹತ್‌ ಮೊತ್ತ ಪೇರಿಸಲು ಉಳಿದವರಿಗೆ ಸಾಧ್ಯವಾಗಲಿಲ್ಲ.

ಪಾಕ್‌ ಪಡೆಯ ಎಂಟು ವಿಕೆಟ್‌ಗಳು ಭಾರತದ ಸ್ಪಿನ್ನರ್‌ಗಳ ಪಾಲಾದವು. ಕುಲದೀಪ್‌ ಯಾದವ್‌ ನಾಲ್ಕು ವಿಕೆಟ್ ಕಬಳಿಸಿದರು. ವರುಣ್‌ ಚಕ್ರವರ್ತಿ, ಅಕ್ಷರ್‌ ಪಟೇಲ್‌ ಹಾಗೂ ವೇಗಿ ಜಸ್‌ಪ್ರೀತ್‌ ಬೂಮ್ರಾ ಎರಡೆರಡು ವಿಕೆಟ್‌ ಹಂಚಿಕೊಂಡರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Final: ಸ್ಪಿನ್ ಸುಳಿಗೆ ಪಾಕ್‌ ತತ್ತರ: ಭಾರತದ ಗೆಲುವಿಗೆ ಸಾಧಾರಣ ಸವಾಲು

Asia Cup Cricket: ಭಾರತಕ್ಕೆ ಶಾಕ್‌: ಫೈನಲ್‌ಗೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅಲಭ್ಯ

ಬಿಸಿಸಿಐ ಸಾರಥಿಯಾಗಿ ಮಿಥುನ್ ಮನ್ಹಾಸ್ ನೇಮಕ: ಕರ್ನಾಟಕದ ರಘುರಾಮ್ ಭಟ್ ಖಜಾಂಚಿ

Asia Cup Cricket: ಫೈನಲ್‌ನಲ್ಲಿ ಭಾರತ–ಪಾಕ್‌ ಮೊದಲ ಬಾರಿ ಮುಖಾಮುಖಿಗೆ ವೇದಿಕೆ ಸಜ್ಜು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

ಮುಂದಿನ ಸುದ್ದಿ
Show comments