Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ರೋಹಿತ್ ಶೂನ್ಯಕ್ಕೆ ಔಟ್, ಕರ್ಮ ರಿಟರ್ನ್ಸ್ ಎಂದ ಕೊಹ್ಲಿ ಫ್ಯಾನ್ಸ್

Webdunia
ಶುಕ್ರವಾರ, 15 ಸೆಪ್ಟಂಬರ್ 2023 (20:09 IST)
ಕೊಲೊಂಬೊ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ ಫೋರ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು. ಬಾಂಗ್ಲಾ ಪರ ನಾಯಕ ಶಕೀಬ್ ಅಲ್ ಹಸನ್ 80 ರನ್ ಗಳಿಸಿದರು. ಅವರಿಗೆ ತಕ್ಕ ಸಾಥ್ ನೀಡಿದ ತೌಹಿದ್ ಹೃದೊಯ್ 54, ನೌಸುಂ ಅಹಮ್ಮದ್ 44 ರನ್ ಗಳಿಸಿದರು. ಭಾರತದ ಪರ ಶಾರ್ದೂಲ್ ಠಾಕೂರ್ 3, ಮೊಹಮ್ಮದ್ ಶಮಿ 2,ಪ್ರಸಿದ್ಧ ಕೃಷ್ಣ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ ತಲಾ 1 ವಿಕೆಟ್ ಕಬಳಿಸಿದರು.

ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ, ತಿಲಕ್ ವರ್ಮ ರೂಪದಲ್ಲಿ ಆಘಾತ ಸಿಕ್ಕಿದೆ. ರೋಹಿತ್ ಶೂನ್ಯಕ್ಕೆ ನಿರ್ಗಮಿಸಿದರೆ ಇಂದು ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ ತಿಲಕ್ ವರ್ಮ 5 ರನ್ ಗೆ ವಿಕೆಟ್ ಒಪ್ಪಿಸಿದರು. ಈ ಪಂದ್ಯದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿರುವುದು ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಿಟ್ಟನ್ನು ರೋಹಿತ್ ಮೇಲೆ ಕೊಹ್ಲಿ ಫ್ಯಾನ್ಸ್ ತೀರಿಸಿಕೊಂಡಿದ್ದಾರೆ. ಕೊಹ್ಲಿಗೆ ಸ್ಥಾನ ನೀಡದ ರೋಹಿತ್ ಶೂನ್ಯಕ್ಕೆ ಔಟಾದರೆ, ಅವರ ಸ್ಥಾನಕ್ಕೆ ಆಯ್ಕೆಯಾದ ತಿಲಕ್ 5 ರನ್ ಗೆ ಔಟಾದರು. ಕರ್ಮ ತಿರುಗಿ ಬಂದೇ ಬರುತ್ತದೆ ಎಂದು ಕೊಹ್ಲಿ ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ. ಇದೀಗ ಕ್ರೀಸ್ ನಲ್ಲಿ 28 ರನ್ ಗಳಿಸಿರುವ ಶುಬ್ಮನ್ ಗಿಲ್ ಮತ್ತು 14 ರನ್ ಗಳಿಸಿರುವ ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಮುಂದಿನ ಸುದ್ದಿ
Show comments