Webdunia - Bharat's app for daily news and videos

Install App

ಬೆಸ್ಟ್ ಬೌಲಿಂಗ್ ತಂದೆಗೆ ಅರ್ಪಣೆ, ಕ್ರೆಡಿಟ್ ಕೋಚ್ ದ್ರಾವಿಡ್ ಗೆ ಎಂದ ಆವೇಶ್ ಖಾನ್

Webdunia
ಶನಿವಾರ, 18 ಜೂನ್ 2022 (09:30 IST)
ರಾಜ್ ಕೋಟ್: ದ.ಆಫ್ರಿಕಾ ವಿರುದ್ಧ ನಾಲ್ಕನೇ ಟಿ20 ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿ 4 ವಿಕೆಟ್ ಕಿತ್ತ ಟೀಂ ಇಂಡಿಯಾ ಯುವ ವೇಗಿ ಈ ಪ್ರದರ್ಶನವನ್ನು ತಂದೆಗೆ ಅರ್ಪಿಸಿದ್ದಾರೆ. ಜೊತೆಗೆ ತನಗೆ ಬೆಂಬಲವಾಗಿ ನಿಂತ ಕೋಚ್ ದ್ರಾವಿಡ್ ಗೆ ಥ್ಯಾಂಕ್ಸ್ ಹೇಳಿದ್ದಾರೆ.

ಆವೇಶ್ ಖಾನ್ ಮೊದಲ ಮೂರು ಪಂದ್ಯಗಳಲ್ಲಿ ವಿಕೆಟ್ ಕೀಳಲು ವಿಫಲರಾಗಿದ್ದರು. ಹೀಗಾಗಿ ಅವರನ್ನು ಕಿತ್ತು ಹಾಕಿ ಉಮ್ರಾನ್ ಮಲಿಕ್ ಗೆ ಅವಕಾಶ ನೀಡಬೇಕೆಂದು ಕೋಚ್ ದ್ರಾವಿಡ್ ಮೇಲೆ ಭಾರೀ ಒತ್ತಡವಿತ್ತು. ಹಾಗಿದ್ದರೂ ದ್ರಾವಿಡ್ ಯಾವುದೇ ಒತ್ತಡಕ್ಕೆ ಮಣಿಯದೇ ಆವೇಶ್ ಖಾನ್ ಗೆ ನಾಲ್ಕನೇ ಪಂದ್ಯದಲ್ಲೂ ಅವಕಾಶ ನೀಡಿದರು. ಅವರ ನಿರೀಕ್ಷೆ ಹುಸಿಗೊಳಿಸದ ಆವೇಶ್ 4 ವಿಕೆಟ್ ಕಿತ್ತು ತಂಡದ ಗೆಲುವಿಗೆ ಕಾರಣವಾದರು.

ಈ ಪ್ರದರ್ಶನದ ಬಳಿಕ ಮಾತನಾಡಿದ ಆವೇಶ್ ಖಾನ್ ‘ಮೊದಲ ಮೂರು ಪಂದ್ಯಗಳಲ್ಲಿ ವಿಕೆಟ್ ಕೀಳಲು ವಿಫಲವಾಗಿದ್ದರಿಂದ ನನ್ನ ಮೇಲೆ ಒತ್ತಡವಿತ್ತು. ಕೋಚ್ ದ್ರಾವಿಡ್ ಭಾಯಿಗೆ ನಾನು ಧನ್ಯವಾದ ಹೇಳಬೇಕು. ನನ್ನ ಮೇಲೆ ವಿಶ್ವಾಸವಿಟ್ಟು ನಾಲ್ಕನೇ ಪಂದ್ಯದಲ್ಲೂ ಅವಕಾಶ ನೀಡಿದರು. ದ್ರಾವಿಡ್ ಸರ್ ಯಾವತ್ತೂ ಒಂದು-ಎರಡು ಪಂದ್ಯದಲ್ಲಿ ಪ್ರದರ್ಶನ ನೀಡಲಿಲ್ಲ ಎಂದು ಆಟಗಾರರನ್ನು ಕಿತ್ತು ಹಾಕಲ್ಲ. ನಮಗೆ ಸಾಬೀತುಪಡಿಸಲು ಸಾಕಷ್ಟು ಅವಕಾಶ ಸಿಗುತ್ತದೆ. ಇದಕ್ಕೆ ನಾನು ಅವರಿಗೆ ಧನ್ಯವಾದ ಹೇಳಲೇಬೇಕು. ಇಂದು ನನ್ನ ತಂದೆಯ ಜನ್ಮದಿನ. ಹೀಗಾಗಿ ಈ ಪ್ರದರ್ಶನವನ್ನು ತಂದೆಗೆ ಅರ್ಪಿಸುತ್ತಿದ್ದೇನೆ’ ಎಂದಿದ್ದಾರೆ ಯುವ ವೇಗಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments