ಕ್ಯಾಚ್ ಕೈ ಬಿಟ್ಟ ತಪ್ಪಿಗೆ ರೋಹಿತ್ ಶರ್ಮಾ ಪ್ರಾಯಶ್ಚಿತ್ತ ಮಾಡಿಕೊಂಡರಾ: ಅಕ್ಸರ್ ಪಟೇಲ್ ಹೇಳಿದ್ದೇನು

Krishnaveni K
ಮಂಗಳವಾರ, 25 ಫೆಬ್ರವರಿ 2025 (16:40 IST)
ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಕ್ಸರ್ ಪಟೇಲ್ ಗೆ ಹ್ಯಾಟ್ರಿಕ್ ಅವಕಾಶ ಕೈತಪ್ಪಿಸಿದ್ದಕ್ಕೆ ರೋಹಿತ್ ಶರ್ಮಾ ಪ್ರಾಯಶ್ಚಿತ್ತವಾಗಿ ಅವರನ್ನು ಡಿನ್ನರ್ ಗೆ ಕರೆದುಕೊಂಡು ಹೋಗಿದ್ದಾರಾ? ಸ್ವತಃ ಅಕ್ಸರ್ ಪಟೇಲ್ ರಿವೀಲ್ ಮಾಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಕ್ಸರ್ ಪಟೇಲ್ ಗೆ ಹ್ಯಾಟ್ರಿಕ್ ಅವಕಾಶವಿತ್ತು. ಆದರೆ ಮೂರನೇ ಎಸೆತದಲ್ಲಿ ರೋಹಿತ್ ಶರ್ಮಾ ಕೈಗೆ ಸುಲಭವಾಗಿ ಬಂದ ಕ್ಯಾಚ್ ಕೈ ಚೆಲ್ಲಿದ್ದರಿಂದ ಅಕ್ಸರ್ ಗೆ ಐತಿಹಾಸಿಕ ದಾಖಲೆ ಮಾಡುವ ಅವಕಾಶ ಮಿಸ್ ಆಯ್ತು.

ಇದಕ್ಕೆ ಅವರು ಮೈದಾನದಲ್ಲೇ ಕೈ ಮುಗಿದು ಅಕ್ಸರ್ ಕ್ಷಮೆ ಯಾಚಿಸಿದ್ದರು. ಪಂದ್ಯದ ಬಳಿಕ ಮಾತನಾಡಿದ್ದ ರೋಹಿತ್, ನಾನು ತಪ್ಪು ಮಾಡಿಬಿಟ್ಟೆ. ಇದರ ಪ್ರಾಯಶ್ಚಿತ್ತವಾಗಿ ಅವರನ್ನು ಡಿನ್ನರ್ ಗೆ ಕರೆದುಕೊಂಡು ಹೋಗುತ್ತೇನೆ ಎಂದಿದ್ದರು.

ನಿಜವಾಗಿ ರೋಹಿತ್ ಡಿನ್ನರ್ ಗೆ ಕರೆದುಕೊಂಡು ಹೋದರೇ? ಈ ಪ್ರಶ್ನೆಗೆ ಉತ್ತರಿಸಿರುವ ಅಕ್ಸರ್ ಪಟೇಲ್, ಇದುವರೆಗೆ ಕರೆದುಕೊಂಡು ಹೋಗಿಲ್ಲ. ಆದರೆ ನಮಗೆ ಒಂದು ವಾರದ ಬ್ರೇಕ್ ಇದೆ. ಈ ಸಮಯದಲ್ಲಿ ಒಂದು ದಿನವಾದರೂ ನಾನು ಡಿನ್ನರ್ ಗೆ ಕರೆದುಕೊಂಡು ಹೋಗಲು ಕೇಳುತ್ತೇನೆ ಎಂದು ತಮಾಷೆಯಾಗಿ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments