Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಎಚ್ಚರಿಕೆ ನೀಡಿದ ಬಾಂಗ್ಲಾದೇಶ ಬೌಲರ್ ನಹೀದ್ ರಾಣಾ

Krishnaveni K
ಬುಧವಾರ, 11 ಸೆಪ್ಟಂಬರ್ 2024 (12:02 IST)
Photo Credit: Facebook
ಢಾಕಾ: ಪಾಕಿಸ್ತಾನ ವಿರುದ್ಧ ಟೆಸ್ಟ್ ಸರಣಿ ಗೆಲುವಿನ ರೂವಾರಿಯಾಗಿದ್ದ ಬಾಂಗ್ಲಾದೇಶ ಬೌಲರ್ ನಹೀದ್ ರಾಣಾ ಈಗ ಟೀಂ ಇಂಡಿಯಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಇತ್ತೀಚೆಗೆ ಬಾಂಗ್ಲಾದೇಶ ತಂಡ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಗೆಲುವಿನಲ್ಲಿ ನಹೀದ್ ರಾಣಾ ಬೌಲಿಂಗ್ ಕೂಡಾ ಪ್ರಮುಖ ಪಾತ್ರ ವಹಿಸಿತ್ತು. ಗಂಟೆಗೆ 150 ಕಿ.ಮೀ. ವೇಗದಲ್ಲಿ ಚೆಂಡೆಸೆದ ನಹೀದ್ ಪಾಕಿಸ್ತಾನದ ಘಟಾನುಘಟಿ ಬ್ಯಾಟಿಗರಾದ ಬಾಬರ್ ಅಜಮ್, ಶಾನ್ ಮಸೂದ್ ರನ್ನು ಕಟ್ಟಿ ಹಾಕಿದ್ದರು.

ಇದೀಗ ಭಾರತದ ವಿರುದ್ಧದ ಸರಣಿಗೆ ಮುನ್ನ ನಹೀದ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಭಾರತ ತಂಡ ಪ್ರಬಲ ತಂಡವೇ ಇರಬಹುದು. ಆದರೆ ಪಂದ್ಯದ ದಿನ ಯಾರು ಚೆನ್ನಾಗಿ ಆಡುತ್ತಾರೋ ಅವರೇ ಗೆಲ್ಲುವುದು ಎಂದು ನಹೀದ್ ರಾಣಾ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ  ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಇದಕ್ಕೆ ಮೊದಲು ಮಾತನಾಡಿರುವ ನಹೀದ್ ರಾಣಾ ನಮ್ಮ ತಂಡ ಭಾರತ ಸರಣಿಗೆ ತಯಾರಿ ಆರಂಭಿಸಿದೆ. ಮೈದಾನದಲ್ಲಿ ನಾವು ಅದ್ಭುತ ಪ್ರದರ್ಶನ ನೀಡಲಿದ್ದೇವೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಭಾರತದಲ್ಲಿ ಅದ್ಭುತ ಪ್ರದರ್ಶನ ನೀಡಲು ತುದಿಗಾಲಲ್ಲಿ ನಿಂತಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments