Webdunia - Bharat's app for daily news and videos

Install App

ಭಾರತ ಪ್ರವಾಸ ಹಾಳುಮಾಡುವುದೇ ಬಾಂಗ್ಲಾ ಕ್ರಿಕೆಟಿಗರ ಉದ್ದೇಶವಾಗಿತ್ತಂತೆ!

Webdunia
ಮಂಗಳವಾರ, 29 ಅಕ್ಟೋಬರ್ 2019 (09:22 IST)
ಢಾಕಾ: ಭಾರತ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿ ಆಡಲು ಇನ್ನೇನು ಪ್ರವಾಸ ಆರಂಭಿಸಬೇಕೆನ್ನುವಷ್ಟರಲ್ಲಿ ಬಾಂಗ್ಲಾದೇಶ ಕ್ರಿಕೆಟಿಗರು ದಿಡೀರ್ ಆಗಿ ಪ್ರತಿಭಟನೆಗೆ ಕೂತಿದ್ದರು.


ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕ್ರಿಕೆಟಿಗರು ಪ್ರತಿಭಟನೆ ನಡೆಸಿದ್ದರಿಂದ ಭಾರತ ಪ್ರವಾಸ ನಡೆಯುವುದೇ ಅನುಮಾನ ಎನ್ನುವಂತಾಗಿತ್ತು. ಆದರೆ ಬಿಸಿಬಿ ಕ್ರಿಕೆಟಿಗರ ಬಹುತೇಕ ಬೇಡಿಕೆಗಳನ್ನು ಒಪ್ಪಿಕೊಂಡಿದ್ದರಿಂದ ಪ್ರತಿಭಟನೆ ಕೈ ಬಿಟ್ಟಿದ್ದರು.

ಆದರೆ ಇದೀಗ ಬಿಸಿಬಿ ಅಧ್ಯಕ್ಷ ನಜ್ಮುಲ್ ಹಸನ್ ಕ್ರಿಕೆಟಿಗರ ಮೇಲೆ ಹೊಸದೊಂದು ಆರೋಪ ಮಾಡಿದ್ದಾರೆ. ತಾನು ಕ್ರಿಕೆಟಿಗರ ಬೇಡಿಕೆ ಒಪ್ಪಿಕೊಳ್ಳಲೇಬಾರದಿತ್ತು. ಇವರಿಗೆಲ್ಲಾ ಭಾರತ ಪ್ರವಾಸ ಹಾಳು ಮಾಡುವ ದುರುದ್ದೇಶವಿತ್ತು. ತಮೀಮ್ ಇಕ್ಬಾಲ್ ಕೌಟುಂಬಿಕ ಕಾರಣ ನೀಡಿ ಇಡೀ ಭಾರತ ಪ್ರವಾಸದಿಂದ ಹಿಂದೆ ಸರಿದಿರುವುದೂ ಇದೇ ಕಾರಣಕ್ಕಾಗಿ ಎಂದು ನಜ್ಮುಲ್ ಆರೋಪಿಸಿದ್ದಾರೆ.

ಹಿರಿಯ ಆಟಗಾರನೆನಿಸಿಕೊಂಡಿರುವ ಶಕೀಬ್ ಅಲ್ ಹಸನ್ ಕೂಡಾ ಇದೇ ರೀತಿ ನಡೆದುಕೊಳ್ಳುತ್ತಾರೆಂದರೆ ಯಾರಿಗೆ ನಾಯಕತ್ವ ನೀಡುವುದು ಎಂದು ನಜ್ಮುಲ್ ಅಸಹಾಯಕತೆ ಪ್ರದರ್ಶಿಸಿದ್ದಾರೆ. ಅವರ ಈ ಹೇಳಿಕೆ ಈಗ ಹೊಸದೊಂದು ವಿವಾದ ಸೃಷ್ಟಿಸಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments