ಭಾರತ ಪ್ರವಾಸ ಹಾಳುಮಾಡುವುದೇ ಬಾಂಗ್ಲಾ ಕ್ರಿಕೆಟಿಗರ ಉದ್ದೇಶವಾಗಿತ್ತಂತೆ!

Webdunia
ಮಂಗಳವಾರ, 29 ಅಕ್ಟೋಬರ್ 2019 (09:22 IST)
ಢಾಕಾ: ಭಾರತ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿ ಆಡಲು ಇನ್ನೇನು ಪ್ರವಾಸ ಆರಂಭಿಸಬೇಕೆನ್ನುವಷ್ಟರಲ್ಲಿ ಬಾಂಗ್ಲಾದೇಶ ಕ್ರಿಕೆಟಿಗರು ದಿಡೀರ್ ಆಗಿ ಪ್ರತಿಭಟನೆಗೆ ಕೂತಿದ್ದರು.


ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕ್ರಿಕೆಟಿಗರು ಪ್ರತಿಭಟನೆ ನಡೆಸಿದ್ದರಿಂದ ಭಾರತ ಪ್ರವಾಸ ನಡೆಯುವುದೇ ಅನುಮಾನ ಎನ್ನುವಂತಾಗಿತ್ತು. ಆದರೆ ಬಿಸಿಬಿ ಕ್ರಿಕೆಟಿಗರ ಬಹುತೇಕ ಬೇಡಿಕೆಗಳನ್ನು ಒಪ್ಪಿಕೊಂಡಿದ್ದರಿಂದ ಪ್ರತಿಭಟನೆ ಕೈ ಬಿಟ್ಟಿದ್ದರು.

ಆದರೆ ಇದೀಗ ಬಿಸಿಬಿ ಅಧ್ಯಕ್ಷ ನಜ್ಮುಲ್ ಹಸನ್ ಕ್ರಿಕೆಟಿಗರ ಮೇಲೆ ಹೊಸದೊಂದು ಆರೋಪ ಮಾಡಿದ್ದಾರೆ. ತಾನು ಕ್ರಿಕೆಟಿಗರ ಬೇಡಿಕೆ ಒಪ್ಪಿಕೊಳ್ಳಲೇಬಾರದಿತ್ತು. ಇವರಿಗೆಲ್ಲಾ ಭಾರತ ಪ್ರವಾಸ ಹಾಳು ಮಾಡುವ ದುರುದ್ದೇಶವಿತ್ತು. ತಮೀಮ್ ಇಕ್ಬಾಲ್ ಕೌಟುಂಬಿಕ ಕಾರಣ ನೀಡಿ ಇಡೀ ಭಾರತ ಪ್ರವಾಸದಿಂದ ಹಿಂದೆ ಸರಿದಿರುವುದೂ ಇದೇ ಕಾರಣಕ್ಕಾಗಿ ಎಂದು ನಜ್ಮುಲ್ ಆರೋಪಿಸಿದ್ದಾರೆ.

ಹಿರಿಯ ಆಟಗಾರನೆನಿಸಿಕೊಂಡಿರುವ ಶಕೀಬ್ ಅಲ್ ಹಸನ್ ಕೂಡಾ ಇದೇ ರೀತಿ ನಡೆದುಕೊಳ್ಳುತ್ತಾರೆಂದರೆ ಯಾರಿಗೆ ನಾಯಕತ್ವ ನೀಡುವುದು ಎಂದು ನಜ್ಮುಲ್ ಅಸಹಾಯಕತೆ ಪ್ರದರ್ಶಿಸಿದ್ದಾರೆ. ಅವರ ಈ ಹೇಳಿಕೆ ಈಗ ಹೊಸದೊಂದು ವಿವಾದ ಸೃಷ್ಟಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments