Webdunia - Bharat's app for daily news and videos

Install App

ಟೀಂ ಇಂಡಿಯಾ ತವರಿಗೆ ಬರುವ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಬಿಸಿಸಿಐ

Krishnaveni K
ಬುಧವಾರ, 3 ಜುಲೈ 2024 (10:29 IST)
ಮುಂಬೈ: ಟಿ20 ವಿಶ್ವಕಪ್ ಚಾಂಪಿಯನ್ ಆದ ಬಳಿಕ ಟೀಂ ಇಂಡಿಯಾ ತವರಿಗೆ ಬರುವುದನ್ನೇ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಅಭಿಮಾನಿಗಳಿಗೆ ಬಿಸಿಸಿಐ ಬಿಗ್ ಅಪ್ ಡೇಟ್ ಒಂದನ್ನು ನೀಡಿದೆ.

ಶನಿವಾರವೇ ಟಿ20 ವಿಶ್ವಕಪ್ ಫೈನಲ್ ಪಂದ್ಯ ಮುಕ್ತಾಯವಾಗಿದ್ದರೂ ಇದುವರೆಗೆ ಆಟಗಾರರಿಗೆ ಭಾರತಕ್ಕೆ ಮರಳಲು ಸಾಧ್ಯವಾಗಲಿಲ್ಲ. ಬಾರ್ಬಡೋಸ್ ನಲ್ಲಿ ಬೆರಿಲ್ ಚಂಡಮಾರುತದಿಂದಾಗಿ ಆಟಗಾರರು ಹೋಟೆಲ್ ರೂಂನಲ್ಲಿಯೇ ಎರಡು ದಿನ ಉಳಿಯಬೇಕಾಗಿ ಬಂತು.

ವಿಮಾನ ಹಾರಾಟವೂ ರದ್ದಾಗಿದ್ದರಿಂದ ಟೀಂ ಇಂಡಿಯಾ ಭಾರತಕ್ಕೆ ಮರಳಲು ಸಾಧ್ಯವಾಗಲಿಲ್ಲ. ಇದೀಗ ವಾತಾವರಣ ತಿಳಿಯಾಗಿದ್ದು ಕ್ರಿಕೆಟಿಗರು ಭಾರತದತ್ತ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ. ವಿಶ್ವಕಪ್ ನ ವಿಡಿಯೋವೊಂದನ್ನು ಹಂಚಿಕೊಂಡ ಬಿಸಿಸಿಐ ಹೋಂ ಕಮಿಂಗ್ ಎಂದು ಬರೆದುಕೊಂಡಿದೆ.

ಇಂದು ಸಂಜೆ ಟೀಂ ಇಂಡಿಯಾ ಕ್ರಿಕೆಟಿಗರು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದು ತಲುಪುವ ಸಾಧ್ಯತೆಯಿದೆ. ಅದಾದ ಬಳಿಕ ಪ್ರಧಾನಿ ಮೋದಿಯನ್ನು ಭೇಟಿಯಾಗುವ ಸಾಧ್ಯತೆಯಿದ್ದು ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿಯಿದೆ. ವಿಶ್ವವಿಜೇತರನ್ನು ನೋಡಲು ಅಭಿಮಾನಿಗಳೂ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments