Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾಗೆ ಸಿಹಿ ಸುದ್ದಿ ಕೊಟ್ಟ ಬಿಸಿಸಿಐ

ಟೀಂ ಇಂಡಿಯಾಗೆ ಸಿಹಿ ಸುದ್ದಿ ಕೊಟ್ಟ ಬಿಸಿಸಿಐ
Mumbai , ಭಾನುವಾರ, 7 ಮೇ 2017 (09:23 IST)
ಮುಂಬೈ: ಐಸಿಸಿಯೊಂದಿಗೆ ತಿಕ್ಕಾಟ ನಡೆಸುತ್ತಿರುವ ಬಿಸಿಸಿಐ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವುದಿಲ್ಲ ಎಂಬ ತನ್ನ ಹಠದಿಂದ ಹಿಂದೆ ಸರಿದಿದೆ. ಕೊನೆಗೂ ಪ್ರತಿಷ್ಠಿತ ಟೂರ್ನಿಯಲ್ಲಿ ಭಾಗವಹಿಸಲು ನಿರ್ಧರಿಸಿದೆ.

 
ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿದೆ ಮತ್ತು ತಂಡದ ಘೋಷಣೆಯನ್ನು ಸೋಮವಾರ ಮಾಡಲಾಗುವುದು ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ನಡೆಯಲಿರುವ ಬಿಸಿಸಿಐ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಕಳೆದ ಬಾರಿಯ ಚಾಂಪಿಯನ್ ಭಾರತ ಈ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವುದು ಅನುಮಾನವಾಗಿತ್ತು.

ಆದರೆ ಭಾರತ ಟೂರ್ನಿಯಲ್ಲಿ ಆಡಬೇಕೆಂದು ಭಾರೀ ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಬಿಸಿಸಿಐ ಮನಸು ಬದಲಿಸಿತು ಎನ್ನಲಾಗಿದೆ. ಜೂನ್ 4 ರಿಂದ ಟೂರ್ನಮೆಂಟ್ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ನಿಂದ ಗೇಟ್ ಪಾಸ್ ಪಡೆದ ಬ್ರೆಂಡಮ್ ಮೆಕ್ಕಲಂ