ಅಯೋಧ್ಯೆಗೆ ತೆರಳಲು ವಿರಾಟ್ ಕೊಹ್ಲಿ, ಅಶ್ವಿನ್ ಗೆ ಬೇಕು ಬಿಸಿಸಿಐ ಒಪ್ಪಿಗೆ!

Krishnaveni K
ಶನಿವಾರ, 20 ಜನವರಿ 2024 (09:20 IST)
ಮುಂಬೈ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಗೆ ಆಹ್ವಾನ ನೀಡಲಾಗಿದೆ.

ವಿರಾಟ್ ಮತ್ತು ಅನುಷ್ಕಾ ದಂಪತಿಯನ್ನು ರಾಮಜನ್ಮಭೂಮಿ ಟ್ರಸ್ಟ್ ಖುದ್ದಾಗಿ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದೆ. ಹೀಗಾಗಿ ಈಗ ವಿರಾಟ್ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆಯೇ ಎಂಬ ಅನುಮಾನ ಮೂಡಿದೆ. ಇದಾದ ಬಳಿಕ ನಿನ್ನೆ ರವಿಚಂದ್ರನ್ ಅಶ್ವಿನ್ ಗೂ ಆಹ್ವಾನ ನೀಡಲಾಗಿದೆ.

ಜನವರಿ 25 ರಿಂದ ಹೈದರಾಬಾದ್ ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಜೊತೆ ವಿರಾಟ್ ಕೊಹ್ಲಿ  ಮತ್ತು ಅಶ್ವಿನ್ ಹೈದರಾಬಾದ್ ನಲ್ಲಿರಲಿದ್ದಾರೆ.

ಹೀಗಾಗಿ ಕೊಹ್ಲಿ, ಅಶ್ವಿನ್ ತಂಡ ಬಿಟ್ಟು ಅಯೋಧ್ಯೆಗೆ ತೆರಳಬೇಕಾದರೆ ಬಿಸಿಸಿಐ ಒಪ್ಪಿಗೆ ಬೇಕಾಗುತ್ತದೆ. ಹೀಗಾಗಿ ಬಿಸಿಸಿಐ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ತೆರಳಲು ಕೊಹ್ಲಿಗೆ ಒಪ್ಪಿಗೆ ನೀಡುತ್ತದೆಯೇ ಎಂದು ಕಾದು ನೋಡಬೇಕಿದೆ. ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅನೇಕ ವಿಐಪಿಗಳು ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ತಂಡ ಮಾರಾಟವಾಗೋದು ಪಕ್ಕಾ: ಮುಂದಿನ ವರ್ಷದಲ್ಲೇ ಫ್ರ್ಯಾಂಚೈಸಿಗೆ ಹೊಸ ಮಾಲೀಕರು

IND vs AUS: ಟೀಂ ಇಂಡಿಯಾಕ್ಕೆ ಮತ್ತೆ ಮತ್ತೆ ಟಾಸ್ ಸೋಲು, ಟಾಸ್ ಗೆಲ್ಲೋದು ಹಣೇಲೇ ಬರೆದಿಲ್ಲ

ಮೊಹಮ್ಮದ್ ಶಮಿ ಏನು ತಪ್ಪು ಮಾಡಿದ್ದಾರೆ.. ಅಜಿತ್ ಅಗರ್ಕರ್ ವಿರುದ್ಧ ಫ್ಯಾನ್ಸ್ ಗರಂ

IND vs AUS: ಟೀಂ ಇಂಡಿಯಾಕ್ಕೆ ಇಂದೂ ಗೆಲ್ಲಲೇಬೇಕು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments