Webdunia - Bharat's app for daily news and videos

Install App

ಗೌತಮ್ ಗಂಭೀರ್ ನೇಮಿಸುವಾಗ ವಿರಾಟ್ ಕೊಹ್ಲಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡದ ಬಿಸಿಸಿಐ

Krishnaveni K
ಗುರುವಾರ, 11 ಜುಲೈ 2024 (11:02 IST)
ಮುಂಬೈ: ಟೀಂ ಇಂಡಿಯಾ ನೂತನ ಕೋಚ್ ಆಗಿ ಗೌತಮ್ ಗಂಭೀರ್ ರನ್ನು ನೇಮಕ ಮಾಡುವ ಮುನ್ನ ತಂಡದ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅಭಿಪ್ರಾಯವನ್ನೇ ಕೇಳಿರಲಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.

ವಿರಾಟ್ ಕೊಹ್ಲಿ ಮತ್ತು ಗಂಭೀರ್ ನಡುವೆ ಈ ಹಿಂದೆ ಹಲವು ಬಾರಿ ಕಿತ್ತಾಟಗಳಾಗಿತ್ತು. ಈಗ ಗಂಭೀರ್ ರನ್ನು ಕೋಚ್ ಆಗಿ ಆಯ್ಕೆ ಮಾಡಿದರೆ ತಂಡದಲ್ಲಿ ಹೊಂದಾಣಿಕೆಯಿರಬಹುದೇ ಎಂಬ ಅನುಮಾನ ಅನೇಕರಿಗಿದೆ. ಕಳೆದ ಬಾರಿ ಐಪಿಎಲ್ ವೇಳೆ ಗಂಭೀರ್ ಮತ್ತು ಕೊಹ್ಲಿ ಪ್ಯಾಚ್ ಅಪ್ ಮಾಡಿಕೊಂಡಿದ್ದರು.

ಆದರೂ ಈ ಹಿಂದಿನ ಘಟನೆಗಳನ್ನು ನೆನದರೆ ಗಂಭೀರ್ ಜೊತೆ ಕೊಹ್ಲಿ ಹೇಗೆ ಹೊಂದಿಕೊಳ್ಳುತ್ತಾರೆ ಎಂಬ ಆತಂಕವಿದೆ. ಈ ನಡುವೆ ಗಂಭೀರ್ ರನ್ನು ಆಯ್ಕೆ ಮಾಡುವ ಮೊದಲು ಬಿಸಿಸಿಐ ಕೊಹ್ಲಿ ಅಭಿಪ್ರಾಯವನ್ನೇ ಕೇಳಿರಲಿಲ್ಲ ಎಂಬ ಮಾತು ಕೇಳಿಬರುತ್ತಿದೆ. ವಿರಾಟ್ ಕೊಹ್ಲಿ ಈಗಾಗಲೇ ಟಿ20 ಕ್ರಿಕೆಟ್ ನಿಂತ ನಿವೃತ್ತರಾಗಿದ್ದಾರೆ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯುವ ಆಟಗಾರರನ್ನು ತಯಾರು ಮಾಡಬಲ್ಲ ಗಂಭೀರ್ ರನ್ನು ಕೋಚ್ ಆಗಿ ನೇಮಿಸಿದೆ.

ಶ್ರೀಲಂಕಾ ವಿರುದ್ಧದ ಸರಣಿ ಗಂಭೀರ್ ಪಾಲಿಗೆ ಕೋಚ್ ಆಗಿ ಮೊದಲ ಸರಣಿಯಾಗಿರಲಿದೆ. ಆದರೆ ಈ ಸರಣಿಯಲ್ಲಿ ಕೊಹ್ಲಿ ಭಾಗಿಯಾಗುತ್ತಿಲ್ಲ ಎಂಬ ವರದಿಗಳಿವೆ. ಕೊಹ್ಲಿ ಮತ್ತು ಗಂಭೀರ್ ಗೆ ತಮ್ಮ ನಡುವಿನ ವೈರುಧ್ಯಗಳನ್ನು ಮಾತನಾಡಿ ಬಗೆಹರಿಸಲು ಎಷ್ಟೋ ಅವಕಾಶಗಳಿವೆ. ಸದ್ಯಕ್ಕೆ ಬಿಸಿಸಿಐ ಇವರಿಬ್ಬರ ವೈಮನಸ್ಯವನ್ನು ಬದಿಗಿಟ್ಟು ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೋಚ್ ಆಯ್ಕೆ ಮಾಡಿದೆ ಎಂದು ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments