Webdunia - Bharat's app for daily news and videos

Install App

ಇಶಾನ್ ಕಿಶನ್ ಎಷ್ಟೇ ಬಡ್ಕೊಂಡ್ರೂ ಕರುಣೆ ತೋರದ ಬಿಸಿಸಿಐ

Krishnaveni K
ಶುಕ್ರವಾರ, 19 ಜುಲೈ 2024 (10:08 IST)
ಮುಂಬೈ: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಎಷ್ಟೇ ಬಾಯಿ ಬಡ್ಕೊಂಡ್ರೂ ಬಿಸಿಸಿಐ ಮಾತ್ರ ಕರುಣೆಯೇ ತೋರುತ್ತಿಲ್ಲ. ಇದೀಗ ಶ್ರೀಲಂಕಾ ವಿರುದ್ಧದ ಟಿ20, ಏಕದಿನ ಸರಣಿಗೂ ಇಶಾನ್ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಗೌತಮ್ ಗಂಭೀರ್ ಕೋಚ್ ಆದ ಮೇಲೆ ತಂಡದಲ್ಲಿ ತಮಗೂ ಸ್ಥಾನ ಸಿಗಬಹುದು ಎಂಬ ಭರವಸೆಯಲ್ಲಿದ್ದ ಇಶಾನ್ ಗೆ ಆಯ್ಕೆ ಸಮಿತಿ ಮತ್ತೆ ನಿರಾಸೆ ಮಾಡಿದೆ. ಟಿ20 ಮತ್ತು ಏಕದಿನ ಸರಣಿಗೆ ಎರಡರಲ್ಲೂ ಇಶಾನ್ ಗೆ ಸ್ಥಾನ ನೀಡಿಲ್ಲ. ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಮತ್ತು ರಿಷಬ್ ಪಂತ್ ಗೆ ಅವಕಾಶ ನೀಡಿದರೆ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ಮತ್ತು ರಿಷಬ್ ಗೆ ಸ್ಥಾನ ನೀಡಲಾಗಿದೆ.

ಈ ಮೊದಲು ದ್ರಾವಿಡ್-ರೋಹಿತ್ ನೇತೃತ್ವದಲ್ಲಿ ಟೀಂ ಇಂಡಿಯಾಗೆ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಆಯ್ಕೆಯಾದರೂ ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆಂದು ನೆಪ ಹೇಳಿ ಇಶಾನ್ ತಪ್ಪಿಸಿಕೊಂಡಿದ್ದರು. ಬಳಿಕ ತಂಡಕ್ಕೆ ವಾಪಸ್ ಆಗಲು ರಣಜಿ ಆಡಬೇಕು ಎಂದು ಕೋಚ್ ದ್ರಾವಿಡ್ ಆದೇಶಿಸಿದ್ದರೂ ಕಡೆಗಣಿಸಿದ್ದರು. ಬಿಸಿಸಿಐ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಕೇಳದೇ ಐಪಿಎಲ್ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು.

ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ತಂಡದಲ್ಲಿ ಸಂಜು ಸ್ಯಾಮ್ಸನ್, ರಿಷಬ್ ಪಂತ್ ಸ್ಥಾನ ಭದ್ರಪಡಿಸಿಕೊಂಡಿದ್ದು ಇಶಾನ್ ಗೆ ಅವಕಾಶವೇ ಇಲ್ಲದಂತಾಗಿದೆ. ಇತ್ತೀಚೆಗೆ ಇಶಾನ್ ತಮ್ಮದಲ್ಲದ ತಪ್ಪಿಗೆ ತಾನು ತಂಡದಿಂದ ಸ್ಥಾನ ಕಳೆದುಕೊಳ್ಳಬೇಕಾಯಿತು. ಅಂದು ನಾನು ನಿಜಕ್ಕೂ ಮಾನಸಿಕವಾಗಿ ಫಿಟ್ ಆಗಿರಲಿಲ್ಲ. ನನ್ನ ಪರಿಸ್ಥಿತಿ ಆವತ್ತು ಹೇಗಿತ್ತು ಎಂದು ನನ್ನ ಆತ್ಮೀಯರಿಗೆ ಮಾತ್ರ ಗೊತ್ತಿತ್ತು. ಫಾರ್ಮ್ ನಲ್ಲಿದ್ದಾಗಲೇ ನನಗೆ ತಂಡದಲ್ಲಿ ಅವಕಾಶ ಸಿಗಲಿಲ್ಲ ಎಂದೆಲ್ಲಾ ಹೇಳಿಕೊಂಡಿದ್ದರು.

ಅವರು ಏನೇ ಹೇಳಿದರೂ ಈಗ ಬಿಸಿಸಿಐ ಮಾತ್ರ ತಂಡದಲ್ಲಿ ಇಶಾನ್ ಗೆ ನೋ ಎಂಟ್ರಿ ಎನ್ನುತ್ತಿದೆ. ಲಂಕಾ ಸರಣಿಗೆ ತಂಡ ಘೋಷಿಸುವ ಎರಡು ದಿನದ ಮೊದಲು ತಾವು ಬ್ಯಾಟಿಂಗ್ ಅಭ್ಯಾಸ ನಡೆಸುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಸಿ ಇಶಾನ್ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಆದರೆ ಅದೆಲ್ಲವೂ ನಿಷ್ಪಲವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments