Webdunia - Bharat's app for daily news and videos

Install App

ಟೀಂ ಇಂಡಿಯಾ ಆಯ್ಕೆಯಲ್ಲೂ ನಡೆದಿದೆ ಒಳಸಂಚು! ಬಿಸಿಸಿಐ ಅಧಿಕಾರಿಯ ಮೇಲೆ ಗಂಭೀರ ಆರೋಪ!

Webdunia
ಗುರುವಾರ, 29 ನವೆಂಬರ್ 2018 (09:05 IST)
ಮುಂಬೈ: ಏಷ್ಯಾ ಕಪ್ ಆಡಿದ ಟೀಂ ಇಂಡಿಯಾ ತಂಡದಲ್ಲಿ ಆಟಗಾರರೊಬ್ಬರನ್ನು ಬಿಸಿಸಿಐ ಆಡಳಿತಾಧಿಕಾರಿಯೊಬ್ಬರ ಕುಮ್ಮಕ್ಕಿನಿಂದ ಆಯ್ಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.


ಈ ಬಗ್ಗೆ ಆಂಗ್ಲ ವಾಹಿನಿಯೊಂದು ವರದಿ ಪ್ರಕಟಿಸಿದೆ. ರೋಹಿತ್ ಶರ್ಮಾ ನೇತೃತ್ವದಲ್ಲಿ ಏಷ್ಯಾ ಕಪ್ ಆಡಿದ ಟೀಂ ಇಂಡಿಯಾಕ್ಕೆ ಒಬ್ಬ ಕ್ರಿಕೆಟಿಗನನ್ನು ಅರ್ಹತೆಯಿಲ್ಲದಿದ್ದೂ ಅಧಿಕಾರಿಯೊಬ್ಬರ ಕುಮ್ಮಕ್ಕಿನಿಂದ ಆಯ್ಕೆ ಮಾಡಲಾಗಿತ್ತು. ಆ ಆಟಗಾರನನ್ನು ಆಯ್ಕೆ ಮಾಡಿದ್ದರ ಔಚಿತ್ಯವೇನು ಎಂಬುದು ಗೊತ್ತಿಲ್ಲ. ಹಾಗಿದ್ದರೂ ಆಯ್ಕೆ ಮಾಡಲಾಗಿತ್ತು ಎಂದು ಹೆಸರು ಹೇಳಲಿಚ್ಛಿಸದ ವ್ಯಕ್ತಿಯೊಬ್ಬರು ಹೇಳಿದ್ದಾರೆಂದು ಮಾಧ್ಯಮ ವರದಿ ಹೇಳಿದೆ.

ಮಹಿಳಾ ಕ್ರಿಕೆಟ್ ತಂಡದಲ್ಲಿ ಕೋಚ್ ರಮೇಶ್ ಪೊವಾರ್ ಮತ್ತು ಬಿಸಿಸಿಐ ಆಡಳಿತಾಧಿಕಾರಿ ಡಿಯಾನ ಎಡುಲ್ಜಿ ತನಗೆ ಅವಮಾನ ಮಾಡಿದ್ದಾರೆಂದು ಹಿರಿಯ ಆಟಗಾರ್ತಿ ಮಿಥಾಲಿ ರಾಜ್ ಆರೋಪಿಸಿದ ಬೆನ್ನಲ್ಲೇ ಈ ವರದಿ ಬಂದಿದೆ. ಹೀಗಾಗಿ ಪುರುಷರ ಕ್ರಿಕೆಟ್ ನಲ್ಲೂ ಅವ್ಯವಹಾರ ನಡೆಯುತ್ತಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments