ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

Krishnaveni K
ಬುಧವಾರ, 29 ಅಕ್ಟೋಬರ್ 2025 (11:35 IST)
ಸಿಡ್ನಿ: ಗಾಯಗೊಂಡು ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸದ್ಯದಲ್ಲೇ ನಿಮಗೆ ಸರ್ಪೈಸ್ ನೀಡಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸಾಯ್ಕಾ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವ ಯತ್ನದಲ್ಲಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಆಂತರಿಕ ರಕ್ತಸ್ರಾವವಾಗಿದ್ದರಿಂದ ಅವರಿಗೆ ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರನ್ನು ಐಸಿಯುವಿನಿಂದ ಹೊರ ಕರೆತರಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಹೇಳಿಕೆ ನೀಡಿದೆ.

ಇದರ ನಡುವೆ ಬಿಸಿಸಿಐ ಕಾರ್ಯದರ್ಶಿ ಸಾಯ್ಕಾ ಶ್ರೇಯಸ್ ಚೇತರಿಕೆ ಬಗ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಸಾಮಾನ್ಯವಾಗಿ ಇಂತಹ ಗಾಯಗಳಾದರೆ ಚೇತರಿಸಲು ಆರರಿಂದ ಎಂಟು ವಾರಗಳೇ ಬೇಕು. ಆದರೆ ಶ್ರೇಯಸ್ ನಾವು ಅಂದುಕೊಂಡಿರುವುದಕ್ಕಿಂತಲೂ ಶೀಘ್ರವಾಗಿ ಗುಣ ಮುಖರಾಗುತ್ತಿದ್ದಾರೆ.

ಹೀಗಾಗಿ ಅವರು ಸದ್ಯದಲ್ಲೇ ನಿಮಗೆ ಸರ್ಪೈಸ್ ನೀಡಬಹುದು. ಅವರು ಶೀಘ್ರದಲ್ಲೇ ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳಬಹುದು. ಅವರ ಚೇತರಿಕೆ ಬಗ್ಗೆ ವೈದ್ಯರು ಸಕಾರಾತ್ಮಕವಾಗಿ ಮಾತನಾಡಿದ್ದಾರೆ. ಶ್ರೇಯಸ್ ಈಗ ತಮ್ಮ ದೈನಂದಿನ ಚಟುವಟಿಕೆ ಮಾಡುತ್ತಿದ್ದಾರೆ. ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಲ್ಲ. ಹೀಗಾಗಿ ಬೇಗನೇ ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಅವರು ಗುಡ್ ನ್ಯೂಸ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments