Webdunia - Bharat's app for daily news and videos

Install App

ಭಾರತ ಪಾಕ್ ವಿರುದ್ಧ ವಿಶ್ವಕಪ್ ಆಡುವ ಕುರಿತು ಕೊನೆಗೂ ನಿರ್ಧಾರಕ್ಕೆ ಬಂದ ಬಿಸಿಸಿಐ!

Webdunia
ಶುಕ್ರವಾರ, 22 ಫೆಬ್ರವರಿ 2019 (16:12 IST)
ಮುಂಬೈ: ಪುಲ್ವಾಮಾ ದಾಳಿ ನಂತರ ಪಾಕಿಸ್ತಾನ ವಿರುದ್ಧ ವಿಶ್ವಕಪ್ ನಲ್ಲಿ ಪಂದ್ಯವಾಡಬೇಕೇ ಬೇಡವೇ ಎಂಬ ಕುರಿತು ಚರ್ಚೆ ನಡೆಸಲು ಸಭೆ ಕರೆದಿದ್ದ ಬಿಸಿಸಿಐ ಆಡಳಿತ ಮಂಡಳಿ ಕೊನೆಗೂ ಒಂದು ತೀರ್ಮಾನಕ್ಕೆ ಬಂದಿದೆ.


ಭಾರತ ಆಡಬೇಕೇ ಬೇಡವೇ ಎಂಬುದು ಇದೀಗ ಕ್ರಿಕೆಟ್ ವಲಯದಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದೆ. ಹಲವರು ಪಾಕ್ ವಿರುದ್ಧ ಆಡುವುದು ಬೇಡ ಎನ್ನುತ್ತಿದ್ದರೂ, ನಿರ್ಣಾಯಕ ಘಟ್ಟದಲ್ಲಿ ಪಾಕ್ ವಿರುದ್ಧ ಪಂದ್ಯ ಬಹಿಷ್ಕರಿಸಿದರೆ ಭಾರತಕ್ಕೇ ನಷ್ಟವಾಗಬಹುದು. ಹೀಗಾಗಿ ಬಿಸಿಸಿಐಗೆ ಈ ವಿಚಾರ ತಲೆನೋವಾಗಿ ಪರಿಣಮಿಸಿತ್ತು.

ಇಂದು ಮುಂಬೈನಲ್ಲಿ ಸಭೆ ಸೇರಿದ ಬಿಸಿಸಿಐ ಆಡಳಿತ ಮಂಡಳಿ ವಿಶ್ವಕಪ್ ನಲ್ಲಿ ಆಡಬೇಕೋ ಬೇಡವೋ ಎಂಬ ವಿಚಾರವನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಧೋನಿ, ಕೋಚ್ ರವಿಶಾಸ್ತ್ರಿಯಂತಹ ಘಟಾನುಘಟಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದೆ. ಹೀಗಾಗಿ ಸದ್ಯಕ್ಕೆ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಫಿಟ್ನೆಸ್ ಟೆಸ್ಟ್ ಪರೀಕ್ಷೆ

ಮುಂದಿನ ಸುದ್ದಿ
Show comments