Webdunia - Bharat's app for daily news and videos

Install App

ಟಿ20 ಗೆ ನಾಯಕನಾಗಲು ರೋಹಿತ್ ಶರ್ಮಾಗೆ ಒತ್ತಡ ಹಾಕುತ್ತಿರುವ ಬಿಸಿಸಿಐ

Webdunia
ಗುರುವಾರ, 30 ನವೆಂಬರ್ 2023 (10:50 IST)
ಮುಂಬೈ: ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೈಟ್ ಬಾಲ್ ಕ್ರಿಕೆಟ್ ನಿಂದ ದೂರ ಸರಿಯಲು ನಿರ್ಧರಿಸಿದ್ದರು. ಆದರೆ ಬಿಸಿಸಿಐಗೆ ಅವರನ್ನು ಕೈ ಬಿಡಲು ಮನಸ್ಸಿಲ್ಲ.

ರೋಹಿತ್ ಶರ್ಮಾ ಈಗಾಗಲೇ ಟಿ20 ಕ್ರಿಕೆಟ್ ನಲ್ಲಿ ಆಡಲು ನಿರಾಕರಿಸುತ್ತಿದ್ದರು. ಹೀಗಾಗಿ ಉಭಯ ದೇಶಗಳ ಸರಣಿಗೆ ಹಾರ್ದಿಕ್ ಪಾಂಡ್ಯರನ್ನು ನಾಯಕನಾಗಿ ಮಾಡಲಾಗುತ್ತಿತ್ತು. ಆದರೆ ಜೂನ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಗೆ ರೋಹಿತ್ ರನ್ನೇ ನಾಯಕರಾಗಿ ಮಾಡಲು ಬಿಸಿಸಿಐ ಪ್ರಯತ್ನ ನಡೆಸಿದೆ.

ಇದಕ್ಕಾಗಿ ಮತ್ತೆ ಟಿ20 ಕ್ರಿಕೆಟ್ ನಾಯಕತ್ವ ಹೊಣೆ ಹೊರಲು ಒತ್ತಡ ಹೇರುತ್ತಿದೆ. ಏಕದಿನ ವಿಶ್ವಕಪ್ ನಲ್ಲಿ ರೋಹಿತ್ ತಂಡವನ್ನು ಮುನ್ನಡೆಸಿದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಹೀಗಾಗಿ ಟಿ20 ವಿಶ್ವಕಪ್ ನಲ್ಲೂ ಅವರನ್ನೇ ನಾಯಕನಾಗಿ ಮಾಡುವ ಇರಾದೆ ಬಿಸಿಸಿಐನದ್ದು.

ಈಗಾಗಲೇ ಕೋಚ್ ಆಗಿ ದ್ರಾವಿಡ್ ರನ್ನೇ ಮುಂದುವರಿಸಲು ಬಿಸಿಸಿಐ ಯಶಸ್ವಿಯಾಗಿದೆ. ಈಗ ರೋಹಿತ್ ರನ್ನೂ ಮನ ಒಲಿಸಿ ಟಿ20 ತಂಡಕ್ಕೆ ಕರೆಸಿಕೊಳ್ಳಲು ಬಿಸಿಸಿಐ ಶತ ಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ರೋಹಿತ್ ರನ್ನು ನಾಯಕನಾಗಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಒಂದು ವೇಳೆ ಅವರು ಬಿಲ್ ಕುಲ್ ಒಪ್ಪದೇ ಹೋದರೆ ಸೂರ್ಯಕುಮಾರ್ ಯಾದವ್ ರನ್ನೇ ತಂಡದ ನಾಯಕನಾಗಿ ನೇಮಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments