Webdunia - Bharat's app for daily news and videos

Install App

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

Krishnaveni K
ಬುಧವಾರ, 6 ಆಗಸ್ಟ್ 2025 (10:15 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಯುವ ಭಾರತೀಯ ತಂಡ ಯಶಸ್ಸು ಸಾಧಿಸಿದ ಬೆನ್ನಲ್ಲೇ ಈಗ ಬಿಸಿಸಿಐ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದು ಈ ಸ್ಟಾರ್ ಆಟಗಾರರ 2027 ರ ವಿಶ್ವಕಪ್ ಆಡುವ ಕನಸಿಗೆ ಕೊಳ್ಳಿಯಿಡುವ ಸಾಧ್ಯತೆಯಿದೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಗೈರಿನಲ್ಲೂ ಶುಭಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 2-2 ರಿಂದ ಸರಣಿ ಸಮಬಲಗೊಳಿಸಲು ಸಾಧ್ಯವಾಗಿದೆ. ಸರಣಿಯುದ್ದಕ್ಕೂ ಈ ಆಟಗಾರರ ಕೊರತೆ ಕಾಡದಂತೆ ಯುವ ಬ್ಯಾಟಿಗರು ನೋಡಿಕೊಂಡಿದ್ದಾರೆ.

ಇದೇ ಕಾರಣಕ್ಕೆ ಈಗ ಶುಭಮನ್ ಗಿಲ್ ಗೇ ಏಕದಿನ ನಾಯಕತ್ವವನ್ನೂ ನೀಡಲು ಬಿಸಿಸಿಐ ಒಲವು ತೋರಿದೆ. ಏಕದಿನ ವಿಶ್ವಕಪ್ ಗೆ ಇನ್ನೂ ಎರಡು ವರ್ಷವಿದೆ. ಈಗಾಗಲೇ ಈ ದಿಗ್ಗಜರು ಟಿ20 ಮತ್ತು ಟೆಸ್ಟ್ ಮಾದರಿಯಿಂದ ನಿವೃತ್ತರಾಗಿದ್ದಾರೆ. ಅಪರೂಪಕ್ಕೆ ಏಕದಿನ ಸರಣಿಯಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಎರಡು ವರ್ಷ ಕಳೆಯುವಷ್ಟರಲ್ಲಿ ಇಬ್ಬರೂ 40 ರ ಹರೆಯಕ್ಕೆ ಕಾಲಿಟ್ಟಿರುತ್ತಾರೆ. ಟೀಂ ಇಂಡಿಯಾದಲ್ಲಿ ಇವರ ಜಾಗ ತುಂಬಬಲ್ಲ ಯುವ ಆಟಗಾರರಿರುತ್ತಾರೆ. ಹೀಗಾಗಿ ಈ ಇಬ್ಬರೂ ಆಟಗಾರರಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನವಿದೆಯೇ, ಅಥವಾ ವಿಶ್ವಕಪ್ ಗೆ ಮುನ್ನ ಇಬ್ಬರಿಗೂ ನಿವೃತ್ತಿಯಾಗಲು ಸೂಚನೆ ನೀಡಲಾಗುತ್ತದೆಯೇ ಎಂಬ ಬಗ್ಗೆ ಬಿಸಿಸಿಐ ಚರ್ಚೆ ನಡೆಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

ಮುಂದಿನ ಸುದ್ದಿ
Show comments