ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

Krishnaveni K
ಗುರುವಾರ, 12 ಜೂನ್ 2025 (14:08 IST)
ಮುಂಬೈ: ಐಪಿಎಲ್ 2025 ಗೆದ್ದ ಬಳಿಕ ವಿಜಯೋತ್ಸವ ಆಚರಿಸಲು ಹೋಗಿ 11 ಜನರ ಸಾವಿಗೆ ಕಾರಣವಾದ ಬೆನ್ನಲ್ಲೇ ಈಗ ಆರ್ ಸಿಬಿ ತಂಡದ ವಿರುದ್ಧ ಬಿಸಿಸಿಐ ಕ್ರಮ ಕೈಗೊಳ್ಳಲು ಮುಂದಾಗಿದೆ.

ಜೂನ್ 14 ರಂದು ಮುಂಬೈನಲ್ಲಿ ಕೌನ್ಸಿಲ್ ಸಭೆ ನಡೆಯಲಿದ್ದು, ಈ ವೇಳೆ ಆರ್ ಸಿಬಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ಜೂನ್ 3 ರಂದು ಐಪಿಎಲ್ ಗೆದ್ದ ಬಳಿಕ ಮರುದಿನವೇ ಬೆಂಗಳೂರಿಗೆ ಬಂದಿದ್ದ ಆರ್ ಸಿಬಿ ಚಿನ್ನಸ್ವಾಮಿ ಮೈದಾನದಲ್ಲಿ ವಿಜಯೋತ್ಸವ ಆಚರಿಸಲು ತೀರ್ಮಾನಿಸಿತ್ತು.

ಸ್ಟೇಡಿಯಂಗೆ ಉಚಿತ ಪ್ರವೇಶವಿದೆ ಎಂಬ ಕಾರಣಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರಿದ್ದರು. ಇದರಿಂದಾಗಿ ನೂಕು ನುಗ್ಗಲು ಉಂಟಾಗಿ 11 ಜನ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಪ್ರತಿಕ್ರಿಯಿಸಿದ್ದ ಬಿಸಿಸಿಐ ಇದನ್ನು ನೋಡುತ್ತಾ ಕೂರಲು ಸಾಧ್ಯವಿಲ್ಲ ಎನ್ನುವ ಮೂಲಕ ಆರ್ ಸಿಬಿ ವಿರುದ್ಧ ಕ್ರಮ ಕೈಗೊಳ್ಳುವ ಸುಳಿವು ನೀಡಿತ್ತು.

ಇದೀಗ ಶನಿವಾರದಂದು ಮುಂಬೈನಲ್ಲಿ ಬಿಸಿಸಿಐ ಸಾಮಾನ್ಯ ಸಭೆ ನಡೆಯಲಿದ್ದು, ಈ ವೇಳೆ ಆರ್ ಸಿಬಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಆರ್ ಸಿಬಿಯನ್ನು ಒಂದು ವರ್ಷದ ಮಟ್ಟಿಗೆ ನಿಷೇಧಿಸಬಹುದು ಎಂಬ ಸುದ್ದಿಗಳೂ ಇತ್ತು. ಇದೀಗ ಬಿಸಿಸಿಐ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments