ಆರ್‌ಸಿಬಿ ಅಭಿಮಾನಿಗಳಿಗೆ ಕಹಿಸುದ್ದಿ: ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯ ಸ್ಥಳಾಂತರ

Sampriya
ಮಂಗಳವಾರ, 20 ಮೇ 2025 (23:25 IST)
Photo Credit X
ನವದೆಹಲಿ:ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅಭಿಮಾನಿಗಳಿಗೆ ಕಹಿಸುದ್ದಿ. ಇದೇ 23ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‌ಸಿಬಿ– ಸನ್‌ರೈಸರ್ಸ್‌ ಹೈದರಾಬಾದ್‌ ಪಂದ್ಯವನ್ನು ಸ್ಥಳಾಂತರ ಮಾಡಲಾಗಿದೆ.

ಮಳೆಯ ಕಾರಣಕ್ಕೆ ಮೇ 23ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಮತ್ತು ಸನ್‌ರೈಸರ್ಸ್ ಹೈದರಾಬಾದ್(ಎಸ್‌ಆರ್‌ಎಚ್‌) ನಡುವಿನ ಪಂದ್ಯವನ್ನು ಲಖನೌಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ಮೇ 17ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿದ್ದ ಕೆಕೆಆರ್‌–ಆರ್‌ಸಿಬಿ ನಡುವಿನ ಪಂದ್ಯವೂ ರದ್ದಾಗಿತ್ತು.

ಈ ಬಾರಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಫೈನಲ್‌ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಕ್ವಾಲಿಫೈಯರ್‌–2 ಪಂದ್ಯಕ್ಕೂ ಅಹಮದಾಬಾದ್ ಆತಿಥ್ಯ ವಹಿಸಲಿದೆ.

ಕ್ವಾಲಿಫೈಯರ್–1 ಮತ್ತು ಎಲಿಮೀನೇಟರ್‌ ಪಂದ್ಯಗಳು ಮುಲ್ಲನಪುರ ಕ್ರೀಡಾಂಗಣದಲ್ಲಿ ಮೇ 29 ಮತ್ತು ಮೇ 30ರಂದು ನಡೆಯಲಿದೆ. ಜೂನ್‌ 3ಕ್ಕೆ ಫೈನಲ್‌ ಪಂದ್ಯ ನಡೆಯಲಿದೆ.

ಹಿಂದಿನ ವೇಳಾಪಟ್ಟಿ ಪ್ರಕಾರ, ಕ್ವಾಲಿಫೈಯರ್–1 ಮತ್ತು ಎಲಿಮೀನೆಟರ್‌ ಪಂದ್ಯಗಳು ಹೈದರಾಬಾದ್‌ನಲ್ಲಿ, ಕ್ವಾಲಿಫೈಯರ್–2, ಫೈನಲ್‌ ಪಂದ್ಯ ಕೋಲ್ಕತ್ತದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಭಾರತ–ಪಾಕಿಸ್ತಾನದ ನಡುವಿನ ಸಂಘರ್ಷದಿಂದ ಪಂದ್ಯಗಳು ಮುಂದೂಡಲ್ಪಟ್ಟಿದ್ದರಿಂದ ವೇಳಾಪಟ್ಟಿಯಲ್ಲಿ ಪರಿಷ್ಕರಣೆಯಾಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಪಲಾಶ್‌ ಜೊತೆ ಸ್ಮೃತಿ ಮಂದಾನ ಹೊಸ ಇನಿಂಗ್ಸ್‌: ಕುಣಿದು ಕುಪ್ಪಳಿಸಿದ ಕ್ಯೂಟ್‌ ಜೊಡಿ

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

ಮುಂದಿನ ಸುದ್ದಿ
Show comments