Webdunia - Bharat's app for daily news and videos

Install App

ಲೋಧಾ ಸಮಿತಿಯ ಸೂಚನೆ: ಬಂಗಾಳ ಮತ್ತು ಕೆಎಸ್‌ಸಿಎ ಚುನಾವಣೆಗಳು ಸ್ಥಗಿತ

Webdunia
ಗುರುವಾರ, 21 ಜುಲೈ 2016 (12:24 IST)
ಸುಪ್ರೀಂಕೋರ್ಟ್ ನೇಮಿಸಿದ ನ್ಯಾ. ಲೋಧಾ ಸಮಿತಿಯು ಶಿಫಾರಸು ಮಾಡಿದ ಸುಧಾರಣೆಗಳನ್ನು ಬಿಸಿಸಿಐ ಮುಂದಿನ 6 ತಿಂಗಳಲ್ಲಿ ಅನುಷ್ಠಾನಗೊಳಿಸಬೇಕಿರುವುದರಿಂದ,  ಎಲ್ಲಾ ಚುನಾವಣೆಗಳನ್ನು ಸ್ಥಗಿತಗೊಳಿಸುವಂತೆ ಬಿಸಿಸಿಐಗೆ  ಲೋಧಾ ಸಮಿತಿ ಸೂಚಿಸಿದೆ.

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಲೋಧಾ ಸಮಿತಿಯು ಅಧ್ಯಕ್ಷ ಅನುರಾಗ್ ಠಾಕುರ್, ಕಾರ್ಯದರ್ಶಿ ಅಜಯ್ ಶಿರ್ಕೆ, ಕೋಶಾಧಿಕಾರಿ ಅನಿರುದ್ ಚೌಧರಿ ಮತ್ತು ಜಂಟಿ ಕಾರ್ಯದರ್ಶಿ ಅಮಿತಾಬ್ ಚೌಧರಿ ಸೇರಿದಂತೆ ಬಿಸಿಸಿಐನ ಎಲ್ಲಾ ಪದಾಧಿಕಾರಿಗಳಿಗೆ ಲೋಧಾ ಸಮಿತಿಯು ನಿರ್ದೇಶನ ನೀಡಿದೆ.
 
 ಈ ನಿರ್ದೇಶನದಿಂದ ಇದೇ 31ರಂದು ನಡೆಯಬೇಕಿದ್ದ ಬಂಗಾಳ ಕ್ರಿಕೆಟ್ ಸಂಸ್ಥೆ ಚುನಾವಣೆಯು ಕರ್ನಾಟಕ ಕ್ರಿಕೆಟ್ ಸಂಸ್ಥೆ ಚುನಾವಣೆ ಜೊತೆಗೆ ಸ್ಥಗಿತಗೊಳ್ಳಲಿದೆ. ಇದೇ ರೀತಿ  ಮಂಗಳವಾರ ನಡೆದ ಜಮ್ಮು ಕಾಶ್ಮೀರ ಕ್ರಿಕೆಟ್ ಸಂಸ್ಥೆ ಚುನಾವಣೆ ಕೂಡ ಅಸಿಂಧುವಾಗಲಿದೆ. ಈ ಚುನಾವಣೆಯಲ್ಲಿ ರಾಜ್ಯ ಸಚಿವ ಇಮ್ರಾನ್ ರಾಜಾ ಅನ್ಸಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
 
ಲೋಧಾ ಸಮಿತಿಯ ಪತ್ರದಲ್ಲಿ ಬಿಸಿಸಿಐ ಮತ್ತು ರಾಜ್ಯ ಸಂಸ್ಥೆಗಳ ಎಲ್ಲಾ ಚುನಾವಣೆಗಳನ್ನು ತಡೆಹಿಡಿಯಬೇಕು ಎಂದು ಸ್ಪಷ್ಟವಾಗಿ ಸೂಚಿಸಿದೆ. ಸುಪ್ರೀಂಕೋರ್ಟ್ ಸೂಚನೆಯಂತೆ ಸಮಿತಿಯು ಕಾರ್ಯಯೋಜನೆ ರೂಪಿಸುವ ಪ್ರಕ್ರಿಯೆಯಲ್ಲಿದ್ದು, ಮುಂದಿನ ಸೂಚನೆ ಬರುವ ತನಕ ಬಿಸಿಸಿಐ ಮತ್ತು ರಾಜ್ಯಸಂಸ್ಥೆಗಳು ಎಲ್ಲಾ ಚುನಾವಣೆಗಳನ್ನು ತಡೆಹಿಡಿಯಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments