Webdunia - Bharat's app for daily news and videos

Install App

ಅಂದು ಗಂಗೂಲಿ ಎದುರಿಸಿದ್ದ ಅವಮಾನವೇ ಇಂದು ವಿರಾಟ್ ಕೊಹ್ಲಿಗೆ

Webdunia
ಸೋಮವಾರ, 13 ಡಿಸೆಂಬರ್ 2021 (09:27 IST)
ಮುಂಬೈ: ಟೀಂ ಇಂಡಿಯಾ ನಾಯಕನ ಹುದ್ದೆ ಆರಂಭದಲ್ಲಿ ರಾಜ ಸಿಂಹಾಸನದಂತೆ ಕಂಡರೂ ಕೊನೆಗೆ ಸಿಗುವುದು ಅವಮಾನವೇ. ಇದು ಗಂಗೂಲಿಯಿಂದ ಹಿಡಿದು ಇದೀಗ ಕೊಹ್ಲಿಯವರೆಗೆ ಸಾಬೀತಾಗಿದೆ.

ಭಾರತಕ್ಕೆ ಗೆಲುವಿನ ಮುಖ ತೋರಿಸಿದ್ದ ಯಶಸ್ವೀ ನಾಯಕ ಸೌರವ್ ಗಂಗೂಲಿಯನ್ನೂ ಬಿಸಿಸಿಐ ಕೊನೆಗೆ ಅವಮಾನಕಾರಿಯಾಗಿ ನಡೆಸಿಕೊಂಡಿತ್ತು. ಗ್ರೆಗ್ ಚಾಪೆಲ್ ಜೊತೆಗಿನ ವಿವಾದದ ಬಳಿಕ ಗಂಗೂಲಿಯಿಂದ ಅಂದು ನಾಯಕತ್ವ ಕಿತ್ತುಕೊಂಡು ಮುಖಭಂಗವಾಗಿತ್ತು.

ಬಳಿಕ ಧೋನಿಗೂ ನಾಯಕರಾಗಿ ಕೊನೆಯ ದಿನಗಳಲ್ಲಿ ಗೌರವ ಸಿಗಲೇ ಇಲ್ಲ. ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಿಗೂ ವೈಫಲ್ಯವಾದಾಗ ನಾಯಕತ್ವವನ್ನು ಕಸಿದುಕೊಳ್ಳುವ ಹಂತಕ್ಕೆ ಬರಲಾಗಿತ್ತು. ಆದರೆ ಅದಕ್ಕೂ ಮೊದಲೇ ಧೋನಿಯೇ ರಾಜೀನಾಮೆ ನೀಡಿ ಹೊರಬಂದಿದ್ದರು.

ಇದೀಗ ವಿರಾಟ್ ಕೊಹ್ಲಿಗೂ ಅದೇ ಗತಿಯಾಗಿದೆ. ನಾಯಕನಾಗಿ ಫಾರ್ಮ್ ನಲ್ಲಿರುವವರೆಗೆ ಮಾತ್ರ ಇಲ್ಲಿ ಮರ್ಯಾದೆ. ಹಳೆಯ ದಾಖಲೆಗಳು ಯಾವುದೂ ಇಲ್ಲಿ ಗಣನೆಗೆ ಬರಲ್ಲ. ವೈಫಲ್ಯ ಅನುಭವಿಸುತ್ತಿದೆ ಎಂದು ಗೊತ್ತಾದಾಗಲೇ ತಾವಾಗಿಯೇ ರಾಜೀನಾಮೆ ಕೊಟ್ಟು ಹೊರಬಂದರೆ ಅವರಿಗೇ ಉತ್ತಮ. ವಿಪರ್ಯಾಸವೆಂದರೆ ಇಂದು ಕೊಹ್ಲಿಯಿಂದ ನಾಯಕತ್ವ ಕಿತ್ತುಕೊಳ್ಳುವಾಗ ಅಂದು ಅವಮಾನ ಅನುಭವಿಸಿದ್ದ ಗಂಗೂಲಿಯೇ ಬಿಸಿಸಿಐ ಅಧ‍್ಯಕ್ಷ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments